ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿಅವರನ್ನು ಧರ್ಮಸ್ಥಳಕ್ಕೆ ಸ್ವಾಗತಿಸಲಾಯಿತು.
ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದರು. ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ತನಗೆ ಈ ಅವಕಾಶ ನೀಡಿದ್ದಾರೆ.ತಕ್ಷಣ ನಾನು ಅದನ್ನು ಸ್ವೀಕರಿಸಿದೆ ಎಂದು ಹೇಳಿದರು.
ಹೆಗ್ಗಡೆಯವರ ನಿವಾಸ ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಹಾಗೂ ಕುಟುಂಬದವರು, ಸಿಬ್ಬಂದಿ ಮತ್ತು ಅಭಿಮಾನಿಗಳು ಭಕ್ತಿಪೂರ್ವಕ ಸ್ವಾಗತಿಸಿದರು.ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…