Advertisement
ಸುದ್ದಿಗಳು

ರಾಷ್ಟ್ರಮಟ್ಟಕ್ಕೆ ಸೇವಾಕಾರ್ಯ ವಿಸ್ತರಣೆ – ಡಾ.ಡಿ.ವೀರೇಂದ್ರ ಹೆಗ್ಗಡೆ

Share

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿಅವರನ್ನು ಧರ್ಮಸ್ಥಳಕ್ಕೆ ಸ್ವಾಗತಿಸಲಾಯಿತು.

ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದರು. ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ತನಗೆ ಈ ಅವಕಾಶ ನೀಡಿದ್ದಾರೆ.ತಕ್ಷಣ ನಾನು ಅದನ್ನು ಸ್ವೀಕರಿಸಿದೆ ಎಂದು ಹೇಳಿದರು.

ಹೆಗ್ಗಡೆಯವರ ನಿವಾಸ  ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಹಾಗೂ ಕುಟುಂಬದವರು, ಸಿಬ್ಬಂದಿ ಮತ್ತು ಅಭಿಮಾನಿಗಳು ಭಕ್ತಿಪೂರ್ವಕ ಸ್ವಾಗತಿಸಿದರು.ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

3 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

6 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

10 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

20 hours ago