Advertisement
ಸುದ್ದಿಗಳು

ರಾಷ್ಟ್ರಮಟ್ಟಕ್ಕೆ ಸೇವಾಕಾರ್ಯ ವಿಸ್ತರಣೆ – ಡಾ.ಡಿ.ವೀರೇಂದ್ರ ಹೆಗ್ಗಡೆ

Share

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿಅವರನ್ನು ಧರ್ಮಸ್ಥಳಕ್ಕೆ ಸ್ವಾಗತಿಸಲಾಯಿತು.

ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದರು. ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ತನಗೆ ಈ ಅವಕಾಶ ನೀಡಿದ್ದಾರೆ.ತಕ್ಷಣ ನಾನು ಅದನ್ನು ಸ್ವೀಕರಿಸಿದೆ ಎಂದು ಹೇಳಿದರು.

ಹೆಗ್ಗಡೆಯವರ ನಿವಾಸ  ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಹಾಗೂ ಕುಟುಂಬದವರು, ಸಿಬ್ಬಂದಿ ಮತ್ತು ಅಭಿಮಾನಿಗಳು ಭಕ್ತಿಪೂರ್ವಕ ಸ್ವಾಗತಿಸಿದರು.ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

55 minutes ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

6 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

13 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

22 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago