Advertisement
ಸುದ್ದಿಗಳು

ರಾಷ್ಟ್ರಮಟ್ಟಕ್ಕೆ ಸೇವಾಕಾರ್ಯ ವಿಸ್ತರಣೆ – ಡಾ.ಡಿ.ವೀರೇಂದ್ರ ಹೆಗ್ಗಡೆ

Share

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿಅವರನ್ನು ಧರ್ಮಸ್ಥಳಕ್ಕೆ ಸ್ವಾಗತಿಸಲಾಯಿತು.

ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದರು. ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ತನಗೆ ಈ ಅವಕಾಶ ನೀಡಿದ್ದಾರೆ.ತಕ್ಷಣ ನಾನು ಅದನ್ನು ಸ್ವೀಕರಿಸಿದೆ ಎಂದು ಹೇಳಿದರು.

ಹೆಗ್ಗಡೆಯವರ ನಿವಾಸ  ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಹಾಗೂ ಕುಟುಂಬದವರು, ಸಿಬ್ಬಂದಿ ಮತ್ತು ಅಭಿಮಾನಿಗಳು ಭಕ್ತಿಪೂರ್ವಕ ಸ್ವಾಗತಿಸಿದರು.ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

2 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

11 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

15 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago