Advertisement
ಸುದ್ದಿಗಳು

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

Share

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ ಹತ್ತಿಕೊಂಡ ಬಗ್ಗೆ ಅರಿವಿಗೆ ಬಂದಿದೆ. ಕೆಲಿಂಜದ ನಿವಾಸಿ ಸಿಟ್ರಿನ್‌ ಪಾಯಸ್‌ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಅದಾಗಲೇ ಕಾರು ಭಸ್ಮವಾಗಿದೆ.

Advertisement
Advertisement
Advertisement
Advertisement

ಶನಿವಾರ ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನಗೊಂಡಿದ್ದರು. ದೆಹಲಿ, ಹೈದರಾಬಾದ್‌ ನಲ್ಲೂ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

Advertisement

ವಿಶ್ವದ ಎಲ್ಲೆಡೆಯೂ ಬೇಸಗೆಯ ಕಾಲದಲ್ಲಿ ಅದರಲ್ಲೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಹೆಚ್ಚಾದ ಸಮಯದಲ್ಲಿ  ಕಾರುಗಳಿಗೆ ಬೇಗನೆ ಬೆಂಕಿ ತಗಲುತ್ತದೆ. ಅಂತರಾಷ್ಟ್ರೀಯ ಸಮೀಕ್ಷೆ ಪ್ರಕಾರ ವರ್ಷಕ್ಕೆ ಸುಮಾರು 229,500 ವಾಹನಗಳ ಬೆಂಕಿಗೆ ಆಹುತಿಯಾಗುತ್ತದೆ. ಹೀಗೆ ಬೆಂಕಿಯ ಅವಘಡದಿಂದಲೇ ಅಂತರಾಷ್ಟ್ರೀಯವಾಗಿ  ವರ್ಷಕ್ಕೆ ಸರಾಸರಿ 328 ಸಾವುಗಳು, 1,426 ಗಾಯಗಳಾದ ಬಗ್ಗೆ ವರದಿಗಳು ಇವೆ. ಬೆಂಕಿಯ ಅವಘಡಕ್ಕೆ ಕೆಲವೊಮ್ಮೆ ವಾಹನದ  ಕಳಪೆ ನಿರ್ವಹಣೆ ಕೂಡಾ ಕಾರಣವಾಗಿರುತ್ತದೆ. ಕೆಲವೊಮ್ಮೆ ತಾಂತ್ರಿಕ ದೋಷಗಳು ಇರುತ್ತವೆ. ಇತರ ಋತುಗಳಿಗೆ ಹೋಲಿಸಿದರೆ  ಬೇಸಗೆಯಲ್ಲಿ ಸುಮಾರು 20% ರಿಂದ 30% ರಷ್ಟು ಹೆಚ್ಚು ವಾಹನ ಬೆಂಕಿಗೆ ಕಾರಣವಾಗಿದೆ.

Advertisement

ಬಹುಮುಖ್ಯವಾಗಿ ಬೇಸಗೆಯ ಕಾಲದಲ್ಲಿ  ಎಲ್ಲರೂ ಎಸಿ ಬಳಕೆ ಮಾಡುತ್ತಾರೆ. ಹೀಗಾಗಿ ವಾಹನದ ಸಾಮರ್ಥ್ಯ ಹೆಚ್ಚು ಬಳಕೆಯಾಗುತ್ತದೆ. ಈ ಸಮಯದಲ್ಲಿ ಎಂಜಿನ್‌ ಕೂಡಾ ಹೆಚ್ಚು ಬಿಸಿಯಾಗುತ್ತದೆ. ವಾತಾವರಣದ ಉಷ್ಣತೆಯೂ 40 ಡಿಗ್ರಿಗಿಂತ ಹೆಚ್ಚಿರುವ ಕಾಲದಲ್ಲಿ ವಾಹನದ ಕೂಲೆಂಟ್‌ ಅಥವಾ ಆಯಿಲ್‌ ಆಗಾಗ ಪರಿಶೀಲನೆ ಮಾಡಲೇಬೇಕಾಗುತ್ತದೆ. ಇಂದಿನ ಪೈಪೋಟಿ ಯುಗದಲ್ಲಿ ಕಾರುಗಳಲ್ಲಿ ಹೊಸ ಪೀಚರ್‌ ನೀಡಲಾಗುತ್ತದೆ. ಆದರೆ ಸಣ್ಣ ಸಣ್ಣ ಸಂಗತಿಗಳೂ ಕೂಡಾ ಇಂದು ಅಪಾಯವನ್ನು ತರುತ್ತದೆ.  ರೇಡಿಯೇಟರ್‌ನಲ್ಲಿ ಕೂಲಂಟ್  ಕೊರತೆಯಿಂದಾಗಿ ಸಮಸ್ಯೆ ಬಂದರೆ, ಇಂಧನ ಸೋರಿಕೆ ಅಥವಾ ಇಂಜಿನ್ ಅತಿಯಾಗಿ ಬಿಸಿಯಾಗುವುದರಿಂದ ಕಾರು ಚಾಲನೆಯಲ್ಲಿರುವಾಗಲೇ ಬೆಂಕಿ ತಗುಲಬಹುದು. ಅಥವಾ ಅತಿಯಾದ ಬಿಸಿಲಿನಲ್ಲಿ ನಿಲುಗಡೆ ಮಾಡುವಾಗಲೂ ದೋಷಗಳ ಕಾರಣದಿಂದ ಬೆಂಕಿ ಹಿಡಿಯುವ ಘಟನೆಗಳು ನಡೆದಿವೆ. ಈ ಕಾರಣಗಳಿಂದಾಗಿ ಬೇಸಗೆಯಲ್ಲಿ ಕಾರಿನ ನಿರ್ವಹಣೆ ಅತೀ ಎಚ್ಚರಿಕೆಯಿಂದ ನಡೆಯಬೇಕಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

8 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

9 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

9 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

19 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

19 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

19 hours ago