ಸುದ್ದಿಗಳು

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ ಹತ್ತಿಕೊಂಡ ಬಗ್ಗೆ ಅರಿವಿಗೆ ಬಂದಿದೆ. ಕೆಲಿಂಜದ ನಿವಾಸಿ ಸಿಟ್ರಿನ್‌ ಪಾಯಸ್‌ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಅದಾಗಲೇ ಕಾರು ಭಸ್ಮವಾಗಿದೆ.

Advertisement

ಶನಿವಾರ ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನಗೊಂಡಿದ್ದರು. ದೆಹಲಿ, ಹೈದರಾಬಾದ್‌ ನಲ್ಲೂ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ವಿಶ್ವದ ಎಲ್ಲೆಡೆಯೂ ಬೇಸಗೆಯ ಕಾಲದಲ್ಲಿ ಅದರಲ್ಲೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಹೆಚ್ಚಾದ ಸಮಯದಲ್ಲಿ  ಕಾರುಗಳಿಗೆ ಬೇಗನೆ ಬೆಂಕಿ ತಗಲುತ್ತದೆ. ಅಂತರಾಷ್ಟ್ರೀಯ ಸಮೀಕ್ಷೆ ಪ್ರಕಾರ ವರ್ಷಕ್ಕೆ ಸುಮಾರು 229,500 ವಾಹನಗಳ ಬೆಂಕಿಗೆ ಆಹುತಿಯಾಗುತ್ತದೆ. ಹೀಗೆ ಬೆಂಕಿಯ ಅವಘಡದಿಂದಲೇ ಅಂತರಾಷ್ಟ್ರೀಯವಾಗಿ  ವರ್ಷಕ್ಕೆ ಸರಾಸರಿ 328 ಸಾವುಗಳು, 1,426 ಗಾಯಗಳಾದ ಬಗ್ಗೆ ವರದಿಗಳು ಇವೆ. ಬೆಂಕಿಯ ಅವಘಡಕ್ಕೆ ಕೆಲವೊಮ್ಮೆ ವಾಹನದ  ಕಳಪೆ ನಿರ್ವಹಣೆ ಕೂಡಾ ಕಾರಣವಾಗಿರುತ್ತದೆ. ಕೆಲವೊಮ್ಮೆ ತಾಂತ್ರಿಕ ದೋಷಗಳು ಇರುತ್ತವೆ. ಇತರ ಋತುಗಳಿಗೆ ಹೋಲಿಸಿದರೆ  ಬೇಸಗೆಯಲ್ಲಿ ಸುಮಾರು 20% ರಿಂದ 30% ರಷ್ಟು ಹೆಚ್ಚು ವಾಹನ ಬೆಂಕಿಗೆ ಕಾರಣವಾಗಿದೆ.

ಬಹುಮುಖ್ಯವಾಗಿ ಬೇಸಗೆಯ ಕಾಲದಲ್ಲಿ  ಎಲ್ಲರೂ ಎಸಿ ಬಳಕೆ ಮಾಡುತ್ತಾರೆ. ಹೀಗಾಗಿ ವಾಹನದ ಸಾಮರ್ಥ್ಯ ಹೆಚ್ಚು ಬಳಕೆಯಾಗುತ್ತದೆ. ಈ ಸಮಯದಲ್ಲಿ ಎಂಜಿನ್‌ ಕೂಡಾ ಹೆಚ್ಚು ಬಿಸಿಯಾಗುತ್ತದೆ. ವಾತಾವರಣದ ಉಷ್ಣತೆಯೂ 40 ಡಿಗ್ರಿಗಿಂತ ಹೆಚ್ಚಿರುವ ಕಾಲದಲ್ಲಿ ವಾಹನದ ಕೂಲೆಂಟ್‌ ಅಥವಾ ಆಯಿಲ್‌ ಆಗಾಗ ಪರಿಶೀಲನೆ ಮಾಡಲೇಬೇಕಾಗುತ್ತದೆ. ಇಂದಿನ ಪೈಪೋಟಿ ಯುಗದಲ್ಲಿ ಕಾರುಗಳಲ್ಲಿ ಹೊಸ ಪೀಚರ್‌ ನೀಡಲಾಗುತ್ತದೆ. ಆದರೆ ಸಣ್ಣ ಸಣ್ಣ ಸಂಗತಿಗಳೂ ಕೂಡಾ ಇಂದು ಅಪಾಯವನ್ನು ತರುತ್ತದೆ.  ರೇಡಿಯೇಟರ್‌ನಲ್ಲಿ ಕೂಲಂಟ್  ಕೊರತೆಯಿಂದಾಗಿ ಸಮಸ್ಯೆ ಬಂದರೆ, ಇಂಧನ ಸೋರಿಕೆ ಅಥವಾ ಇಂಜಿನ್ ಅತಿಯಾಗಿ ಬಿಸಿಯಾಗುವುದರಿಂದ ಕಾರು ಚಾಲನೆಯಲ್ಲಿರುವಾಗಲೇ ಬೆಂಕಿ ತಗುಲಬಹುದು. ಅಥವಾ ಅತಿಯಾದ ಬಿಸಿಲಿನಲ್ಲಿ ನಿಲುಗಡೆ ಮಾಡುವಾಗಲೂ ದೋಷಗಳ ಕಾರಣದಿಂದ ಬೆಂಕಿ ಹಿಡಿಯುವ ಘಟನೆಗಳು ನಡೆದಿವೆ. ಈ ಕಾರಣಗಳಿಂದಾಗಿ ಬೇಸಗೆಯಲ್ಲಿ ಕಾರಿನ ನಿರ್ವಹಣೆ ಅತೀ ಎಚ್ಚರಿಕೆಯಿಂದ ನಡೆಯಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

12 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

13 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

21 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago