Advertisement
ಸುದ್ದಿಗಳು

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

Share

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ ಹತ್ತಿಕೊಂಡ ಬಗ್ಗೆ ಅರಿವಿಗೆ ಬಂದಿದೆ. ಕೆಲಿಂಜದ ನಿವಾಸಿ ಸಿಟ್ರಿನ್‌ ಪಾಯಸ್‌ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಅದಾಗಲೇ ಕಾರು ಭಸ್ಮವಾಗಿದೆ.

ಶನಿವಾರ ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನಗೊಂಡಿದ್ದರು. ದೆಹಲಿ, ಹೈದರಾಬಾದ್‌ ನಲ್ಲೂ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ವಿಶ್ವದ ಎಲ್ಲೆಡೆಯೂ ಬೇಸಗೆಯ ಕಾಲದಲ್ಲಿ ಅದರಲ್ಲೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಹೆಚ್ಚಾದ ಸಮಯದಲ್ಲಿ  ಕಾರುಗಳಿಗೆ ಬೇಗನೆ ಬೆಂಕಿ ತಗಲುತ್ತದೆ. ಅಂತರಾಷ್ಟ್ರೀಯ ಸಮೀಕ್ಷೆ ಪ್ರಕಾರ ವರ್ಷಕ್ಕೆ ಸುಮಾರು 229,500 ವಾಹನಗಳ ಬೆಂಕಿಗೆ ಆಹುತಿಯಾಗುತ್ತದೆ. ಹೀಗೆ ಬೆಂಕಿಯ ಅವಘಡದಿಂದಲೇ ಅಂತರಾಷ್ಟ್ರೀಯವಾಗಿ  ವರ್ಷಕ್ಕೆ ಸರಾಸರಿ 328 ಸಾವುಗಳು, 1,426 ಗಾಯಗಳಾದ ಬಗ್ಗೆ ವರದಿಗಳು ಇವೆ. ಬೆಂಕಿಯ ಅವಘಡಕ್ಕೆ ಕೆಲವೊಮ್ಮೆ ವಾಹನದ  ಕಳಪೆ ನಿರ್ವಹಣೆ ಕೂಡಾ ಕಾರಣವಾಗಿರುತ್ತದೆ. ಕೆಲವೊಮ್ಮೆ ತಾಂತ್ರಿಕ ದೋಷಗಳು ಇರುತ್ತವೆ. ಇತರ ಋತುಗಳಿಗೆ ಹೋಲಿಸಿದರೆ  ಬೇಸಗೆಯಲ್ಲಿ ಸುಮಾರು 20% ರಿಂದ 30% ರಷ್ಟು ಹೆಚ್ಚು ವಾಹನ ಬೆಂಕಿಗೆ ಕಾರಣವಾಗಿದೆ.

ಬಹುಮುಖ್ಯವಾಗಿ ಬೇಸಗೆಯ ಕಾಲದಲ್ಲಿ  ಎಲ್ಲರೂ ಎಸಿ ಬಳಕೆ ಮಾಡುತ್ತಾರೆ. ಹೀಗಾಗಿ ವಾಹನದ ಸಾಮರ್ಥ್ಯ ಹೆಚ್ಚು ಬಳಕೆಯಾಗುತ್ತದೆ. ಈ ಸಮಯದಲ್ಲಿ ಎಂಜಿನ್‌ ಕೂಡಾ ಹೆಚ್ಚು ಬಿಸಿಯಾಗುತ್ತದೆ. ವಾತಾವರಣದ ಉಷ್ಣತೆಯೂ 40 ಡಿಗ್ರಿಗಿಂತ ಹೆಚ್ಚಿರುವ ಕಾಲದಲ್ಲಿ ವಾಹನದ ಕೂಲೆಂಟ್‌ ಅಥವಾ ಆಯಿಲ್‌ ಆಗಾಗ ಪರಿಶೀಲನೆ ಮಾಡಲೇಬೇಕಾಗುತ್ತದೆ. ಇಂದಿನ ಪೈಪೋಟಿ ಯುಗದಲ್ಲಿ ಕಾರುಗಳಲ್ಲಿ ಹೊಸ ಪೀಚರ್‌ ನೀಡಲಾಗುತ್ತದೆ. ಆದರೆ ಸಣ್ಣ ಸಣ್ಣ ಸಂಗತಿಗಳೂ ಕೂಡಾ ಇಂದು ಅಪಾಯವನ್ನು ತರುತ್ತದೆ.  ರೇಡಿಯೇಟರ್‌ನಲ್ಲಿ ಕೂಲಂಟ್  ಕೊರತೆಯಿಂದಾಗಿ ಸಮಸ್ಯೆ ಬಂದರೆ, ಇಂಧನ ಸೋರಿಕೆ ಅಥವಾ ಇಂಜಿನ್ ಅತಿಯಾಗಿ ಬಿಸಿಯಾಗುವುದರಿಂದ ಕಾರು ಚಾಲನೆಯಲ್ಲಿರುವಾಗಲೇ ಬೆಂಕಿ ತಗುಲಬಹುದು. ಅಥವಾ ಅತಿಯಾದ ಬಿಸಿಲಿನಲ್ಲಿ ನಿಲುಗಡೆ ಮಾಡುವಾಗಲೂ ದೋಷಗಳ ಕಾರಣದಿಂದ ಬೆಂಕಿ ಹಿಡಿಯುವ ಘಟನೆಗಳು ನಡೆದಿವೆ. ಈ ಕಾರಣಗಳಿಂದಾಗಿ ಬೇಸಗೆಯಲ್ಲಿ ಕಾರಿನ ನಿರ್ವಹಣೆ ಅತೀ ಎಚ್ಚರಿಕೆಯಿಂದ ನಡೆಯಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

3 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

3 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

4 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

6 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

8 hours ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

13 hours ago