Advertisement
ಸುದ್ದಿಗಳು

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

Share

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ ಹತ್ತಿಕೊಂಡ ಬಗ್ಗೆ ಅರಿವಿಗೆ ಬಂದಿದೆ. ಕೆಲಿಂಜದ ನಿವಾಸಿ ಸಿಟ್ರಿನ್‌ ಪಾಯಸ್‌ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಅದಾಗಲೇ ಕಾರು ಭಸ್ಮವಾಗಿದೆ.

Advertisement
Advertisement

ಶನಿವಾರ ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನಗೊಂಡಿದ್ದರು. ದೆಹಲಿ, ಹೈದರಾಬಾದ್‌ ನಲ್ಲೂ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

Advertisement

ವಿಶ್ವದ ಎಲ್ಲೆಡೆಯೂ ಬೇಸಗೆಯ ಕಾಲದಲ್ಲಿ ಅದರಲ್ಲೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಹೆಚ್ಚಾದ ಸಮಯದಲ್ಲಿ  ಕಾರುಗಳಿಗೆ ಬೇಗನೆ ಬೆಂಕಿ ತಗಲುತ್ತದೆ. ಅಂತರಾಷ್ಟ್ರೀಯ ಸಮೀಕ್ಷೆ ಪ್ರಕಾರ ವರ್ಷಕ್ಕೆ ಸುಮಾರು 229,500 ವಾಹನಗಳ ಬೆಂಕಿಗೆ ಆಹುತಿಯಾಗುತ್ತದೆ. ಹೀಗೆ ಬೆಂಕಿಯ ಅವಘಡದಿಂದಲೇ ಅಂತರಾಷ್ಟ್ರೀಯವಾಗಿ  ವರ್ಷಕ್ಕೆ ಸರಾಸರಿ 328 ಸಾವುಗಳು, 1,426 ಗಾಯಗಳಾದ ಬಗ್ಗೆ ವರದಿಗಳು ಇವೆ. ಬೆಂಕಿಯ ಅವಘಡಕ್ಕೆ ಕೆಲವೊಮ್ಮೆ ವಾಹನದ  ಕಳಪೆ ನಿರ್ವಹಣೆ ಕೂಡಾ ಕಾರಣವಾಗಿರುತ್ತದೆ. ಕೆಲವೊಮ್ಮೆ ತಾಂತ್ರಿಕ ದೋಷಗಳು ಇರುತ್ತವೆ. ಇತರ ಋತುಗಳಿಗೆ ಹೋಲಿಸಿದರೆ  ಬೇಸಗೆಯಲ್ಲಿ ಸುಮಾರು 20% ರಿಂದ 30% ರಷ್ಟು ಹೆಚ್ಚು ವಾಹನ ಬೆಂಕಿಗೆ ಕಾರಣವಾಗಿದೆ.

Advertisement

ಬಹುಮುಖ್ಯವಾಗಿ ಬೇಸಗೆಯ ಕಾಲದಲ್ಲಿ  ಎಲ್ಲರೂ ಎಸಿ ಬಳಕೆ ಮಾಡುತ್ತಾರೆ. ಹೀಗಾಗಿ ವಾಹನದ ಸಾಮರ್ಥ್ಯ ಹೆಚ್ಚು ಬಳಕೆಯಾಗುತ್ತದೆ. ಈ ಸಮಯದಲ್ಲಿ ಎಂಜಿನ್‌ ಕೂಡಾ ಹೆಚ್ಚು ಬಿಸಿಯಾಗುತ್ತದೆ. ವಾತಾವರಣದ ಉಷ್ಣತೆಯೂ 40 ಡಿಗ್ರಿಗಿಂತ ಹೆಚ್ಚಿರುವ ಕಾಲದಲ್ಲಿ ವಾಹನದ ಕೂಲೆಂಟ್‌ ಅಥವಾ ಆಯಿಲ್‌ ಆಗಾಗ ಪರಿಶೀಲನೆ ಮಾಡಲೇಬೇಕಾಗುತ್ತದೆ. ಇಂದಿನ ಪೈಪೋಟಿ ಯುಗದಲ್ಲಿ ಕಾರುಗಳಲ್ಲಿ ಹೊಸ ಪೀಚರ್‌ ನೀಡಲಾಗುತ್ತದೆ. ಆದರೆ ಸಣ್ಣ ಸಣ್ಣ ಸಂಗತಿಗಳೂ ಕೂಡಾ ಇಂದು ಅಪಾಯವನ್ನು ತರುತ್ತದೆ.  ರೇಡಿಯೇಟರ್‌ನಲ್ಲಿ ಕೂಲಂಟ್  ಕೊರತೆಯಿಂದಾಗಿ ಸಮಸ್ಯೆ ಬಂದರೆ, ಇಂಧನ ಸೋರಿಕೆ ಅಥವಾ ಇಂಜಿನ್ ಅತಿಯಾಗಿ ಬಿಸಿಯಾಗುವುದರಿಂದ ಕಾರು ಚಾಲನೆಯಲ್ಲಿರುವಾಗಲೇ ಬೆಂಕಿ ತಗುಲಬಹುದು. ಅಥವಾ ಅತಿಯಾದ ಬಿಸಿಲಿನಲ್ಲಿ ನಿಲುಗಡೆ ಮಾಡುವಾಗಲೂ ದೋಷಗಳ ಕಾರಣದಿಂದ ಬೆಂಕಿ ಹಿಡಿಯುವ ಘಟನೆಗಳು ನಡೆದಿವೆ. ಈ ಕಾರಣಗಳಿಂದಾಗಿ ಬೇಸಗೆಯಲ್ಲಿ ಕಾರಿನ ನಿರ್ವಹಣೆ ಅತೀ ಎಚ್ಚರಿಕೆಯಿಂದ ನಡೆಯಬೇಕಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

13 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

21 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

22 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

22 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

23 hours ago