Advertisement
ಸುದ್ದಿಗಳು

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

Share

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ ಹತ್ತಿಕೊಂಡ ಬಗ್ಗೆ ಅರಿವಿಗೆ ಬಂದಿದೆ. ಕೆಲಿಂಜದ ನಿವಾಸಿ ಸಿಟ್ರಿನ್‌ ಪಾಯಸ್‌ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಅದಾಗಲೇ ಕಾರು ಭಸ್ಮವಾಗಿದೆ.

ಶನಿವಾರ ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನಗೊಂಡಿದ್ದರು. ದೆಹಲಿ, ಹೈದರಾಬಾದ್‌ ನಲ್ಲೂ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

Advertisement

ವಿಶ್ವದ ಎಲ್ಲೆಡೆಯೂ ಬೇಸಗೆಯ ಕಾಲದಲ್ಲಿ ಅದರಲ್ಲೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಹೆಚ್ಚಾದ ಸಮಯದಲ್ಲಿ  ಕಾರುಗಳಿಗೆ ಬೇಗನೆ ಬೆಂಕಿ ತಗಲುತ್ತದೆ. ಅಂತರಾಷ್ಟ್ರೀಯ ಸಮೀಕ್ಷೆ ಪ್ರಕಾರ ವರ್ಷಕ್ಕೆ ಸುಮಾರು 229,500 ವಾಹನಗಳ ಬೆಂಕಿಗೆ ಆಹುತಿಯಾಗುತ್ತದೆ. ಹೀಗೆ ಬೆಂಕಿಯ ಅವಘಡದಿಂದಲೇ ಅಂತರಾಷ್ಟ್ರೀಯವಾಗಿ  ವರ್ಷಕ್ಕೆ ಸರಾಸರಿ 328 ಸಾವುಗಳು, 1,426 ಗಾಯಗಳಾದ ಬಗ್ಗೆ ವರದಿಗಳು ಇವೆ. ಬೆಂಕಿಯ ಅವಘಡಕ್ಕೆ ಕೆಲವೊಮ್ಮೆ ವಾಹನದ  ಕಳಪೆ ನಿರ್ವಹಣೆ ಕೂಡಾ ಕಾರಣವಾಗಿರುತ್ತದೆ. ಕೆಲವೊಮ್ಮೆ ತಾಂತ್ರಿಕ ದೋಷಗಳು ಇರುತ್ತವೆ. ಇತರ ಋತುಗಳಿಗೆ ಹೋಲಿಸಿದರೆ  ಬೇಸಗೆಯಲ್ಲಿ ಸುಮಾರು 20% ರಿಂದ 30% ರಷ್ಟು ಹೆಚ್ಚು ವಾಹನ ಬೆಂಕಿಗೆ ಕಾರಣವಾಗಿದೆ.

Advertisement

ಬಹುಮುಖ್ಯವಾಗಿ ಬೇಸಗೆಯ ಕಾಲದಲ್ಲಿ  ಎಲ್ಲರೂ ಎಸಿ ಬಳಕೆ ಮಾಡುತ್ತಾರೆ. ಹೀಗಾಗಿ ವಾಹನದ ಸಾಮರ್ಥ್ಯ ಹೆಚ್ಚು ಬಳಕೆಯಾಗುತ್ತದೆ. ಈ ಸಮಯದಲ್ಲಿ ಎಂಜಿನ್‌ ಕೂಡಾ ಹೆಚ್ಚು ಬಿಸಿಯಾಗುತ್ತದೆ. ವಾತಾವರಣದ ಉಷ್ಣತೆಯೂ 40 ಡಿಗ್ರಿಗಿಂತ ಹೆಚ್ಚಿರುವ ಕಾಲದಲ್ಲಿ ವಾಹನದ ಕೂಲೆಂಟ್‌ ಅಥವಾ ಆಯಿಲ್‌ ಆಗಾಗ ಪರಿಶೀಲನೆ ಮಾಡಲೇಬೇಕಾಗುತ್ತದೆ. ಇಂದಿನ ಪೈಪೋಟಿ ಯುಗದಲ್ಲಿ ಕಾರುಗಳಲ್ಲಿ ಹೊಸ ಪೀಚರ್‌ ನೀಡಲಾಗುತ್ತದೆ. ಆದರೆ ಸಣ್ಣ ಸಣ್ಣ ಸಂಗತಿಗಳೂ ಕೂಡಾ ಇಂದು ಅಪಾಯವನ್ನು ತರುತ್ತದೆ.  ರೇಡಿಯೇಟರ್‌ನಲ್ಲಿ ಕೂಲಂಟ್  ಕೊರತೆಯಿಂದಾಗಿ ಸಮಸ್ಯೆ ಬಂದರೆ, ಇಂಧನ ಸೋರಿಕೆ ಅಥವಾ ಇಂಜಿನ್ ಅತಿಯಾಗಿ ಬಿಸಿಯಾಗುವುದರಿಂದ ಕಾರು ಚಾಲನೆಯಲ್ಲಿರುವಾಗಲೇ ಬೆಂಕಿ ತಗುಲಬಹುದು. ಅಥವಾ ಅತಿಯಾದ ಬಿಸಿಲಿನಲ್ಲಿ ನಿಲುಗಡೆ ಮಾಡುವಾಗಲೂ ದೋಷಗಳ ಕಾರಣದಿಂದ ಬೆಂಕಿ ಹಿಡಿಯುವ ಘಟನೆಗಳು ನಡೆದಿವೆ. ಈ ಕಾರಣಗಳಿಂದಾಗಿ ಬೇಸಗೆಯಲ್ಲಿ ಕಾರಿನ ನಿರ್ವಹಣೆ ಅತೀ ಎಚ್ಚರಿಕೆಯಿಂದ ನಡೆಯಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

8 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

9 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

12 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

16 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

19 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

20 hours ago