Advertisement
ಸುದ್ದಿಗಳು

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

Share

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ ಹತ್ತಿಕೊಂಡ ಬಗ್ಗೆ ಅರಿವಿಗೆ ಬಂದಿದೆ. ಕೆಲಿಂಜದ ನಿವಾಸಿ ಸಿಟ್ರಿನ್‌ ಪಾಯಸ್‌ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಅದಾಗಲೇ ಕಾರು ಭಸ್ಮವಾಗಿದೆ.

ಶನಿವಾರ ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನಗೊಂಡಿದ್ದರು. ದೆಹಲಿ, ಹೈದರಾಬಾದ್‌ ನಲ್ಲೂ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ವಿಶ್ವದ ಎಲ್ಲೆಡೆಯೂ ಬೇಸಗೆಯ ಕಾಲದಲ್ಲಿ ಅದರಲ್ಲೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಹೆಚ್ಚಾದ ಸಮಯದಲ್ಲಿ  ಕಾರುಗಳಿಗೆ ಬೇಗನೆ ಬೆಂಕಿ ತಗಲುತ್ತದೆ. ಅಂತರಾಷ್ಟ್ರೀಯ ಸಮೀಕ್ಷೆ ಪ್ರಕಾರ ವರ್ಷಕ್ಕೆ ಸುಮಾರು 229,500 ವಾಹನಗಳ ಬೆಂಕಿಗೆ ಆಹುತಿಯಾಗುತ್ತದೆ. ಹೀಗೆ ಬೆಂಕಿಯ ಅವಘಡದಿಂದಲೇ ಅಂತರಾಷ್ಟ್ರೀಯವಾಗಿ  ವರ್ಷಕ್ಕೆ ಸರಾಸರಿ 328 ಸಾವುಗಳು, 1,426 ಗಾಯಗಳಾದ ಬಗ್ಗೆ ವರದಿಗಳು ಇವೆ. ಬೆಂಕಿಯ ಅವಘಡಕ್ಕೆ ಕೆಲವೊಮ್ಮೆ ವಾಹನದ  ಕಳಪೆ ನಿರ್ವಹಣೆ ಕೂಡಾ ಕಾರಣವಾಗಿರುತ್ತದೆ. ಕೆಲವೊಮ್ಮೆ ತಾಂತ್ರಿಕ ದೋಷಗಳು ಇರುತ್ತವೆ. ಇತರ ಋತುಗಳಿಗೆ ಹೋಲಿಸಿದರೆ  ಬೇಸಗೆಯಲ್ಲಿ ಸುಮಾರು 20% ರಿಂದ 30% ರಷ್ಟು ಹೆಚ್ಚು ವಾಹನ ಬೆಂಕಿಗೆ ಕಾರಣವಾಗಿದೆ.

ಬಹುಮುಖ್ಯವಾಗಿ ಬೇಸಗೆಯ ಕಾಲದಲ್ಲಿ  ಎಲ್ಲರೂ ಎಸಿ ಬಳಕೆ ಮಾಡುತ್ತಾರೆ. ಹೀಗಾಗಿ ವಾಹನದ ಸಾಮರ್ಥ್ಯ ಹೆಚ್ಚು ಬಳಕೆಯಾಗುತ್ತದೆ. ಈ ಸಮಯದಲ್ಲಿ ಎಂಜಿನ್‌ ಕೂಡಾ ಹೆಚ್ಚು ಬಿಸಿಯಾಗುತ್ತದೆ. ವಾತಾವರಣದ ಉಷ್ಣತೆಯೂ 40 ಡಿಗ್ರಿಗಿಂತ ಹೆಚ್ಚಿರುವ ಕಾಲದಲ್ಲಿ ವಾಹನದ ಕೂಲೆಂಟ್‌ ಅಥವಾ ಆಯಿಲ್‌ ಆಗಾಗ ಪರಿಶೀಲನೆ ಮಾಡಲೇಬೇಕಾಗುತ್ತದೆ. ಇಂದಿನ ಪೈಪೋಟಿ ಯುಗದಲ್ಲಿ ಕಾರುಗಳಲ್ಲಿ ಹೊಸ ಪೀಚರ್‌ ನೀಡಲಾಗುತ್ತದೆ. ಆದರೆ ಸಣ್ಣ ಸಣ್ಣ ಸಂಗತಿಗಳೂ ಕೂಡಾ ಇಂದು ಅಪಾಯವನ್ನು ತರುತ್ತದೆ.  ರೇಡಿಯೇಟರ್‌ನಲ್ಲಿ ಕೂಲಂಟ್  ಕೊರತೆಯಿಂದಾಗಿ ಸಮಸ್ಯೆ ಬಂದರೆ, ಇಂಧನ ಸೋರಿಕೆ ಅಥವಾ ಇಂಜಿನ್ ಅತಿಯಾಗಿ ಬಿಸಿಯಾಗುವುದರಿಂದ ಕಾರು ಚಾಲನೆಯಲ್ಲಿರುವಾಗಲೇ ಬೆಂಕಿ ತಗುಲಬಹುದು. ಅಥವಾ ಅತಿಯಾದ ಬಿಸಿಲಿನಲ್ಲಿ ನಿಲುಗಡೆ ಮಾಡುವಾಗಲೂ ದೋಷಗಳ ಕಾರಣದಿಂದ ಬೆಂಕಿ ಹಿಡಿಯುವ ಘಟನೆಗಳು ನಡೆದಿವೆ. ಈ ಕಾರಣಗಳಿಂದಾಗಿ ಬೇಸಗೆಯಲ್ಲಿ ಕಾರಿನ ನಿರ್ವಹಣೆ ಅತೀ ಎಚ್ಚರಿಕೆಯಿಂದ ನಡೆಯಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

22 hours ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

1 day ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

2 days ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

3 days ago