ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |

July 19, 2024
12:27 PM
ಶುಕ್ರವಾರ ಬೆಳಗ್ಗೆ 10:30 ರಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಘಾಟಿ ಪ್ರದೇಶದ ಅಲ್ಲಲ್ಲಿ ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಹಾಸನ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟಿಯ ಮೂಲಕ ಸಂಚಾರವನ್ನು ಗುರುವಾರ ರಾತ್ರಿಯಿಂದಲೇ ನಿಷೇಧಿಸಿತ್ತು. ಹಾಸನದಿಂದ ಮಾರನಹಳ್ಳಿ ವರೆಗಿನ ಸಂಚಾರ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ಪ್ರದೇಶದಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಸಂಭಾವ್ಯ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದೆ. ಶುಕ್ರವಾರ ಬೆಳಗ್ಗೆ 10:30 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಗುರುವಾರ ರಾತ್ರಿಯಿಂದಲೇ ಗುಂಡ್ಯ ಹಾಗೂ ಅಡ್ಡ ಹೊಳೆ ಪರಿಸರದಲ್ಲಿ 2 ಸಾಲಿನಲ್ಲಿ ಟ್ಯಾಂಕರ್, ಟ್ರೈಲರ್ ಸಹಿತ ಘನವಾಹನಗಳು ರಸ್ತೆಯ ಮಧ್ಯದಲ್ಲಿಯೇ ನಿಂತು ಸ್ಥಳೀಯರಿಗೂ, ಸಂಚರಿಸಲು ಅಸಾಧ್ಯವಾಗಿತ್ತು. ಶಿರಾಡಿ ಗಡಿಯ ಚೌಡೇಶ್ವರಿ ದೇವಸ್ಥಾನದ ಮೇಲಿನ ಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದಿದ ಪರಿಣಾಮ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮರತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದರು. ಗುರುವಾರ ರಾತ್ರಿಯಿಂದಲೂ ಶಿರಾಡಿ ಹಾಗೂ ಮಾರನಹಳ್ಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು ಶುಕ್ರವಾರವೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಾರನ ಹಳ್ಳಿಯ ದೊಡ್ಡ ತಪ್ಪಲ್ಲಲ್ಲಿ ಗುಡ್ಡ ಕುಸಿತ ಸಣ್ಣ ಪ್ರಮಾಣದಲ್ಲಿ ಮುಂದುವರೆದಿದೆ.  ಇಂದು ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

Vehicular traffic has been permitted at Shiradi Ghati starting at 10:30 am on Friday. However, there have been reports of collapses in the Ghati region. As a result, there is a possibility that traffic may be halted at night for safety reasons.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror