Advertisement
MIRROR FOCUS

ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |

Share

ಹಾಸನ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟಿಯ ಮೂಲಕ ಸಂಚಾರವನ್ನು ಗುರುವಾರ ರಾತ್ರಿಯಿಂದಲೇ ನಿಷೇಧಿಸಿತ್ತು. ಹಾಸನದಿಂದ ಮಾರನಹಳ್ಳಿ ವರೆಗಿನ ಸಂಚಾರ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ಪ್ರದೇಶದಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಸಂಭಾವ್ಯ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದೆ. ಶುಕ್ರವಾರ ಬೆಳಗ್ಗೆ 10:30 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಗುರುವಾರ ರಾತ್ರಿಯಿಂದಲೇ ಗುಂಡ್ಯ ಹಾಗೂ ಅಡ್ಡ ಹೊಳೆ ಪರಿಸರದಲ್ಲಿ 2 ಸಾಲಿನಲ್ಲಿ ಟ್ಯಾಂಕರ್, ಟ್ರೈಲರ್ ಸಹಿತ ಘನವಾಹನಗಳು ರಸ್ತೆಯ ಮಧ್ಯದಲ್ಲಿಯೇ ನಿಂತು ಸ್ಥಳೀಯರಿಗೂ, ಸಂಚರಿಸಲು ಅಸಾಧ್ಯವಾಗಿತ್ತು. ಶಿರಾಡಿ ಗಡಿಯ ಚೌಡೇಶ್ವರಿ ದೇವಸ್ಥಾನದ ಮೇಲಿನ ಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದಿದ ಪರಿಣಾಮ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮರತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದರು. ಗುರುವಾರ ರಾತ್ರಿಯಿಂದಲೂ ಶಿರಾಡಿ ಹಾಗೂ ಮಾರನಹಳ್ಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು ಶುಕ್ರವಾರವೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಾರನ ಹಳ್ಳಿಯ ದೊಡ್ಡ ತಪ್ಪಲ್ಲಲ್ಲಿ ಗುಡ್ಡ ಕುಸಿತ ಸಣ್ಣ ಪ್ರಮಾಣದಲ್ಲಿ ಮುಂದುವರೆದಿದೆ.  ಇಂದು ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

Vehicular traffic has been permitted at Shiradi Ghati starting at 10:30 am on Friday. However, there have been reports of collapses in the Ghati region. As a result, there is a possibility that traffic may be halted at night for safety reasons.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

7 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

8 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

9 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

9 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

9 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

10 hours ago