Advertisement
MIRROR FOCUS

ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |

Share

ಹಾಸನ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟಿಯ ಮೂಲಕ ಸಂಚಾರವನ್ನು ಗುರುವಾರ ರಾತ್ರಿಯಿಂದಲೇ ನಿಷೇಧಿಸಿತ್ತು. ಹಾಸನದಿಂದ ಮಾರನಹಳ್ಳಿ ವರೆಗಿನ ಸಂಚಾರ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ಪ್ರದೇಶದಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಸಂಭಾವ್ಯ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದೆ. ಶುಕ್ರವಾರ ಬೆಳಗ್ಗೆ 10:30 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಗುರುವಾರ ರಾತ್ರಿಯಿಂದಲೇ ಗುಂಡ್ಯ ಹಾಗೂ ಅಡ್ಡ ಹೊಳೆ ಪರಿಸರದಲ್ಲಿ 2 ಸಾಲಿನಲ್ಲಿ ಟ್ಯಾಂಕರ್, ಟ್ರೈಲರ್ ಸಹಿತ ಘನವಾಹನಗಳು ರಸ್ತೆಯ ಮಧ್ಯದಲ್ಲಿಯೇ ನಿಂತು ಸ್ಥಳೀಯರಿಗೂ, ಸಂಚರಿಸಲು ಅಸಾಧ್ಯವಾಗಿತ್ತು. ಶಿರಾಡಿ ಗಡಿಯ ಚೌಡೇಶ್ವರಿ ದೇವಸ್ಥಾನದ ಮೇಲಿನ ಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದಿದ ಪರಿಣಾಮ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮರತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದರು. ಗುರುವಾರ ರಾತ್ರಿಯಿಂದಲೂ ಶಿರಾಡಿ ಹಾಗೂ ಮಾರನಹಳ್ಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು ಶುಕ್ರವಾರವೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಾರನ ಹಳ್ಳಿಯ ದೊಡ್ಡ ತಪ್ಪಲ್ಲಲ್ಲಿ ಗುಡ್ಡ ಕುಸಿತ ಸಣ್ಣ ಪ್ರಮಾಣದಲ್ಲಿ ಮುಂದುವರೆದಿದೆ.  ಇಂದು ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

Vehicular traffic has been permitted at Shiradi Ghati starting at 10:30 am on Friday. However, there have been reports of collapses in the Ghati region. As a result, there is a possibility that traffic may be halted at night for safety reasons.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

4 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

12 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

19 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago