Advertisement
The Rural Mirror ವಾರದ ವಿಶೇಷ

ಕಿಂಡಿ ಅಣೆಕಟ್ಟಿನಿಂದ ಗ್ರಾಮೀಣ ಜನರಿಗೆ ಸಂಕಷ್ಟ …! | ಜಾರಿಯಾಗದ ಜಿಲ್ಲಾಧಿಕಾರಿಗಳ ಆದೇಶ |

Share

ಬಳಕೆಯಲ್ಲಿರದ ಕಿಂಡಿ ಆಣೆಕಟ್ಟುಗಳಲ್ಲಿ ಮಳೆಗಾಲದಲ್ಲಿ ಮರದ ತುಂಡು, ಕಸ ತುಂಬಿ ಎರಡು ಬದಿಯ ಹೊಳೆಯ ಮಧ್ಯೆ ಇರುವ ರಸ್ತೆ ಕಡಿತಕ್ಕೆ ಕಾರಣವಾಗುತ್ತಿರುವುದರಿಂದ  ತಕ್ಷಣ ತೆರವುಗೊಳಿಸುವಂತೆ ದ.ಕ. ಜಿಲ್ಲಾಧಿಕಾರಿಯವರು ಮಾಡಿದ ಆದೇಶವನ್ನು ಸ್ಥಳೀಯಾಡಳಿತ ಜಾರಿಗೊಳಿಸದೇ ಇರುವುದರಿಂದ ಅಪಾಯದ ಸ್ಥಿತಿ ಮುಂದುವರಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ  ನಡೆಯುತ್ತಿದೆ.

ಬಡಗನ್ನೂರು ಗ್ರಾಮದ ಪಟ್ಟೆಯಿಂದ ಮುಂಡೋಳೆ, ಅಂಬಟೆಮೂಳೆ ಮೂಲಕ ಈಶ್ವರಮಂಗಲಕ್ಕೆ ಸಂಪರ್ಕಿಸುವ ಬಹುಮುಖ್ಯ ರಸ್ತೆಯ ಪಟ್ಟೆಯಿಂದ 200 ಮೀ. ದೂರದಲ್ಲಿ ದಶಕಗಳ ಹಿಂದೆ ಸಣ್ಣ ನೀರಾವರಿ ಇಲಾಖೆಯ ಮೂಲಕ ಈ ಕಿಂಡಿ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಕೆಲವು ಸಮಯ ಹಲಗೆ ಆಳವಡಿಸಿ ಪ್ರಯೋಜನಕಾರಿಯಾಗಿದ್ದ ಈ ಕಿಂಡಿ ಆಣೆಕಟ್ಟು ಈ ಸಮಸ್ಯೆಗೆ ಕಾರಣವಾಗುತ್ತಿದೆ.

ಏನು ಸಮಸ್ಯೆ ? : ಇಲ್ಲಿ ಯು ಮಾದರಿಯಲ್ಲಿ ಸೀರೆ ಹೊಳೆ ಹರಿಯುತ್ತದೆ. ಹೊಳೆ ಸುತ್ತು ಬಳಸಿ ಹರಿಯುತ್ತಿದ್ದು, ಮಧ್ಯೆ ಕಿರು ಸೇತುವೆಯ ಮೂಲಕ ಸಾಗುವ ರಸ್ತೆ ಇದೆ. ತಗ್ಗಿನಲ್ಲಿರುವ ಕಿಂಡಿ ಆಣೆಕಟ್ಟಿನಲ್ಲಿ ಮಳೆಗಾಲದಲ್ಲಿ ತೇಲಿ ಬರುವ ಮರದ ತುಂಡು, ಕಸ ಕಡ್ಡಿಗಳು ನಿಂತು ಸರಾಗ ನೀರು ಹರಿಯಲು ಸಮಸ್ಯೆಯಾಗುತ್ತದೆ. ಈ ಸಮಸ್ಯೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿದೆ. ಇದರ ಪರಿಣಾಮ ಪಕ್ಷದಲ್ಲಿರುವ ಸ್ಥಳೀಯ ನಿವಾಸಿಯೊಬ್ಬರ ಸುಮಾರು ಅರ್ಧ ಎಕ್ರೆಯಷ್ಟು ಕೃಷಿ ತೋಟ ಕೊರೆದು ಹೋಗಿದೆ. ಜತೆಗೆ ಮಳೆಗಾಲದಲ್ಲಿ ಇಕ್ಕೆಲಗಳ ತೋಡಿನ ನೀರು ಸಂಗಮಗೊಂಡು ರಸ್ತೆಯಲ್ಲಿ ಹರಿದು ರಸ್ತೆ ಕಡಿತಗೊಳ್ಳುತ್ತಾ ಹೋಗುತ್ತಿದೆ. ರಕ್ಷಣಾ ಕ್ರಮಗಳು ಪ್ರಯೋಜನಕ್ಕೆ ಬರುತ್ತಿಲ್ಲ.
ಬೆಟ್ಟಂಪಾಡಿ, ಪೆರಿಗೇರಿ, ಪಾಣಾಜೆ ಸೇರಿದಂತೆ ವಿವಿಧ ಕಡೆಗಳಿಂದ ಈಶ್ವರಮಂಗಲ ತೆರಳುವವರಿಗೆ ಇದು ಸುಲಭ ದಾರಿ. ಈ ರಸ್ತೆಯಲ್ಲಿ ಪಟ್ಟೆ ಸೇರಿದಂತೆ ನಗರಕ್ಕೆ ನೂರಾರು ವಿದ್ಯಾರ್ಥಿಗಳು, ಉದ್ಯೋಗಿಗಳು ತೆರಳುತ್ತಾರೆ. ಮಳೆಗಾಲದಲ್ಲಿ ಹಲವು ಬಾರಿ ರಸ್ತೆ ಮುಳುಗಡೆಯಾಗುತ್ತಿದ್ದು, ಜನರು ಸಂಕಷ್ಟಪಡುತ್ತಿದ್ದಾರೆ. ಸಣ್ಣ ಮಕ್ಕಳ ಸಂಚಾರಕ್ಕಂತೂ ಅಪಾಯಕಾರಿಯಾಗಿದೆ.
ಜಿಲ್ಲಾಧಿಕಾರಿಗೆ ದೂರು: ಕಿಂಡಿ ಆಣೆಕಟ್ಟಿನ ಕಾರಣದಿಂದ ಉಂಟಾಗಿರುವ ಸಮಸ್ಯೆಯ ಕುರಿತು ಹಾಗೂ ತೆರವಿಗೆ ಕ್ರಮ ಕೈಗೊಳ್ಳುವಂತೆ ನೂರಾರು ಮಂದಿ ಸಾರ್ವಜನಿಕರ ಸಹಿಗಳುಳ್ಳ ಮನವಿಯನ್ನು ಬಡಗನ್ನೂರು ಗ್ರಾ.ಪಂ.ನ ಸುಳ್ಯಪದವಿನಲ್ಲಿ ಎ.17 ರಂದು ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ನೀಡಲಾಗಿತ್ತು. ಪರಿಸ್ಥಿತಿಯ ಅರಿವು ಪಡೆದುಕೊಂಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಣೆಕಟ್ಟಿನ ತೆರವಿಗೆ ಸ್ಥಳದಲ್ಲೇ ಆದೇಶ ನೀಡಿದ್ದರು. ಆದರೆ ಸಂಬಂಧಪಟ್ಟವರು ವಿಳಂಬ ಧೋರಣೆ ಅನುಸರಿಸಿದ ಪರಿಣಾಮ ಸಮಸ್ಯೆ ಬಿಗಡಾಯಿಸಿದೆ. ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಈ ಜವಾಬ್ದಾರಿ ನೀಡಲಾಗಿದೆ. ಗ್ರಾ.ಪಂ. ಆಡಳಿತ ಹಾಗೂ ಇಲಾಖೆಯ ಮಧ್ಯೆ ಸಮನ್ವಯದಲ್ಲಿ ಕೊರತೆ ಉಂಟಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

7 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

14 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

23 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago