Advertisement
MIRROR FOCUS

ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು

Share

ಕನ್ನಡದ ಹಿರಿಯ ನಟರಾದ  ದ್ವಾರಕೀಶ್‌ ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ(Actor). ಚಿತ್ರರಸಿಕರನ್ನು ತಮ್ಮ ಕುಳ್ಳಗಿನ ದೇಹದ ಮೂಲಕ ರಂಜಿಸಿದ್ದಾರೆ. ಹಲವಾರು ಚಿತ್ರಗಳಲ್ಲಿ ನಟಿಸಿದ್ದಲ್ಲದೆ, ನಿರ್ದೇಶನ(Director), ಚಿತ್ರ ನಿರ್ಮಾಣವನ್ನು ಮಾಡಿ ಸೈ ಎನಿಸಿಕೊಂಡಿದ್ದವರು ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh). ಅವರು ಇಂದು ನಮ್ಮನ್ನೆಲ್ಲಾ ಅಗಲಿದ್ದಾರೆ.  ನಿಧನರಾಗಿದ್ದಾರೆ.

81 ರ ವಯಸ್ಸಿನ  ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.ಹಿರಿಯ ನಟ ದ್ವಾರಕೀಶ್ (Dwarkish) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ (Death). ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.  ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ.

ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ‌. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ.

ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ನೆನೆದಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

6 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

6 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

15 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

15 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

15 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

16 hours ago