MIRROR FOCUS

ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕನ್ನಡದ ಹಿರಿಯ ನಟರಾದ  ದ್ವಾರಕೀಶ್‌ ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ(Actor). ಚಿತ್ರರಸಿಕರನ್ನು ತಮ್ಮ ಕುಳ್ಳಗಿನ ದೇಹದ ಮೂಲಕ ರಂಜಿಸಿದ್ದಾರೆ. ಹಲವಾರು ಚಿತ್ರಗಳಲ್ಲಿ ನಟಿಸಿದ್ದಲ್ಲದೆ, ನಿರ್ದೇಶನ(Director), ಚಿತ್ರ ನಿರ್ಮಾಣವನ್ನು ಮಾಡಿ ಸೈ ಎನಿಸಿಕೊಂಡಿದ್ದವರು ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh). ಅವರು ಇಂದು ನಮ್ಮನ್ನೆಲ್ಲಾ ಅಗಲಿದ್ದಾರೆ.  ನಿಧನರಾಗಿದ್ದಾರೆ.

Advertisement

81 ರ ವಯಸ್ಸಿನ  ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.ಹಿರಿಯ ನಟ ದ್ವಾರಕೀಶ್ (Dwarkish) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ (Death). ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.  ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ.

ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ‌. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ.

ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ನೆನೆದಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

15 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

16 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago