Exclusive - Mirror Hunt

ವಿಭೂತಿಗಾಗಿ ವರ್ಷಕ್ಕೊಮ್ಮೆ ಗುಹೆ ಪ್ರವೇಶ | ಬಾಯಾರಿನಲ್ಲಿ ವಿಶೇಷ ಆಚರಣೆ | ಬೆಳಕಿಲ್ಲದ ದಾರಿಯಲ್ಲಿ ಬೆಳಕು ತೋರುವ ವಿಶೇಷ ಶಕ್ತಿ….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಭೂತಿಗಾಗಿ ಗುಹೆ ಪ್ರವೇಶ ಮಾಡುವ ವಿಶೇಷವಾದ ಆಚರಣೆ ಗಡಿನಾಡು ಜಿಲ್ಲೆ ಕಾಸರಗೋಡಿನ ಬಾಯಾರು ಬಳಿಯ ಪೊಸಡಿಗುಂಪೆಯಲ್ಲಿ  ನಡೆಯುತ್ತದೆ. ವರ್ಷಕ್ಕೊಮ್ಮೆ ಮಾತ್ರಾ ಈ ಗುಹೆಯನ್ನು ಊರ ಮಂದಿ ಪ್ರವೇಶ ಮಾಡುತ್ತಾರೆ.  ಬೆಳಕಿಲ್ಲದ ಅತೀ ಸಣ್ಣ ದಾರಿಯಲ್ಲಿ  ತೆವಳುತ್ತಾ, ಏಳುತ್ತಾ ಸುಮಾರು  500  ಮೀಟರ್‌ ದೂರ ಸಾಗಿ ಅಲ್ಲಿ ಸಿಗುವ ವಿಭೂತಿ, ಮಣ್ಣನ್ನು ತರುತ್ತಾರೆ. ಈ ವಿಭೂತಿಯಲ್ಲಿ ವಿಶೇಷ ಔಷಧೀಯ ಗುಣ ಇದೆ ಎಂದು ನಂಬಿಕೆ ಇದೆ. ಅನೇಕ ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ.

Advertisement
ಗುಹಾ ಪ್ರವೇಶದ ವಿಡಿಯೋ

 

ಬಾಯಾರು ಗ್ರಾಮದ ಪೊಸಡಿಗುಂಪೆಯ ತಪ್ಪಲಲ್ಲಿ  ಒಂದು ಗುಹೆ ಇದೆ. ಅನೇಕ ವರ್ಷಗಳಿಂದ ಇಲ್ಲೊಂದು ಆಚರಣೆ ನಡೆಯುತ್ತಿದೆ. ಇಲ್ಲಿನ ಊರ ಮಂದಿ ಪ್ರತೀ ವರ್ಷ ತೀರ್ಥ ಅಮವಾಸ್ಯೆಯಂದು ಈ ಗುಹೆಗೆ ಪ್ರವೇಶ ಮಾಡುತ್ತಾರೆ. 10-12  ಮಂದಿಯ 2-3 ತಂಡ ಆ ದಿನ ಇಡೀ ತಂಡ ತಂಡವಾಗಿ ತೆರಳಿ ಗುಹೆಯ ಒಳಗೆ ಸಿಗುವ ವಿಭೂತಿ ಅಥವಾ ಮಣ್ಣನ್ನು ತರುತ್ತಾರೆ. ಆ ಬಳಿಕ ಅದನ್ನು  ಒಣಗಿಸಿ ಭಸ್ಮ ಧಾರಣೆ ಅಥವಾ ಔಷಧೀಯವಾಗಿಯೂ ಬಳಕೆ ಮಾಡುತ್ತಾರೆ. ಅನೇಕ ವರ್ಷಗಳಿಂದ ಈ ಆಚರಣೆ ನಡೆದುಕೊಂಡು ಬಂದಿದೆ. ಐತಿಹಾಸಿಕವಾಗಿಯೂ ಪೊಸಡಿಗುಂಪೆಯ ಈ ಪ್ರದೇಶ ಮಹತ್ವ ಪಡೆದಿದೆ. ಗುಡ್ಡದ ತಪ್ಪಲಿಲ್ಲಿ ಈ ಗುಹೆ ಇದೆ. ವರ್ಷದಲ್ಲಿ  ಒಮ್ಮೆ ಮಾತ್ರಾ ಈ ಗುಹೆಯ ಒಳಗೆ ಪ್ರವೇಶ ಮಾಡುತ್ತಾರೆ. ಉಳಿದ ದಿನಗಳಲ್ಲಿ  ಈ ಗುಹೆಗೆ ಯಾರೂ ಪ್ರವೇಶ ಮಾಡುವುದಿಲ್ಲ, ಆ ದಿನಗಳಲ್ಲಿ  ಕಾಳಿಂಗ ಸರ್ಪ ಅಥವಾ ನಾಗರ ಹಾವು ಇರುತ್ತದೆ ಎನ್ನುವ ನಂಬಿಕೆ ಇದೆ.

ಈ ಗುಹೆ ಪ್ರವೇಶಕ್ಕೆ ಮುನ್ನ ಇಲ್ಲೇ ಹರಿಯುವ ತೊರೆಯಲ್ಲಿ  ತೀರ್ಥ ಸ್ನಾನ ಮಾಡಿದ ಬಳಿಕ ಧಾರ್ಮಿಮ ವಿಧಿ ವಿಧಾನಗಳ ನಂತರ ಗುಹೆ ಪ್ರವೇಶ ನಡೆಯುತ್ತದೆ. ಗುಹೆಯ ಒಳಗೆ ಪ್ರವೇಶ ಮಾಡಿ ಸುಮಾರು  500 ಮೀಟರ್‌ ದೂರ ತೆವಳುತ್ತಾ,  ಇಳಿಯುತ್ತಾ, ಏರುತ್ತಾ  ಸಾಗಿ ಅಲ್ಲಿ ಸಂಗ್ರಹ ನಡೆಯುತ್ತದೆ. ಈ ಹಿಂದೆ ತೆರಳಿದ ಮಂದಿಗೆ ವಿಭೂತಿ ತೆಗೆಯುವ ಪ್ರದೇಶದ ಬಗ್ಗೆ ಮಾಹಿತಿ ಇರುತ್ತದೆ. ಹೀಗಾಗಿ ಪ್ರತೀ ವರ್ಷ ಕನಿಷ್ಟ ಒಂದಿಬ್ಬರು ಹೊಸ ಯುವಕರೂ ವಿಭೂತಿ ಸಂಗ್ರಹಕ್ಕೆ ತೆರಳುತ್ತಾರೆ. ಸಂಪೂರ್ಣ ಕತ್ತಲೆಯಿಂದ ಆವೃತವಾಗಿರುವ ಗುಹಾ ಪ್ರವೇಶದ ಸಂದರ್ಭ ದೇವರ ಮೇಲಿನ ನಂಬಿಕೆ ಹಾಗೂ ಮುಂದೆ ಇರುವ ಹಿರಿಯರು ತೋರಿದ ದಾರಿಯೇ ದಾರಿದೀಪವಾಗುತ್ತದೆ ಇಲ್ಲಿ. 

ಇಲ್ಲಿಂದ ಅನತಿ ದೂರದಲ್ಲಿ  ಬಾಯಾರು ಪಂಚಲಿಂಗೇಶ್ವರ ದೇವಸ್ಥಾನ ಇದೆ. ಈ ದೇವಸ್ಥಾನದಲ್ಲಿ  ಕೊಪ್ಪರಿಗೆ ಏರಿದ ಬಳಿಕ ಅನೇಕ ಸಮಯಗಳವರೆಗೆ ಕೊಪ್ಪರಿಗೆ ಏರಿರುತ್ತದೆ, ಆ ದೇವರ ಪ್ರಸಾದದ ಒಲೆಯಿಂದಲೇ ಇಲ್ಲಿ  ಪ್ರಸಾದವಾಗಿ ವಿಭೂತಿ ದೊರೆಯುತ್ತದೆ ಎನ್ನುವುದು  ನಂಬಿಕೆ. ಈ ಗುಹೆಯಲ್ಲೂ ವಿವಿಧ ದಾರಿಗಳು ಕಾಣುತ್ತವೆ ಎಂದು ಗುಹೆ ಪ್ರವೇಶ ಮಾಡಿದ ಮಂದಿ ಹೇಳುತ್ತಾರೆ.

ಇಲ್ಲಿ  ಸಂಗ್ರಹ ಆಗುವ ವಿಭೂತಿಯ ಧಾರಣೆಯಿಂದ ಅಥವಾ ಪ್ರಸಾದ ತೆಗೆದುಕೊಳ್ಳುವುದರಿಂದ ಚರ್ಮ ವ್ಯಾಧಿಗಳು, ದೇಹದ ಇತರ ಕಾಯಿಲೆಗಳ ನಿವಾರಣೆಯಾಗುತ್ತದೆ ಎನ್ನುತ್ತಾರೆ ಸ್ಥಳೀಯರು. ಹಲವು ಮಂದಿಗೆ ಇದರ ಪ್ರತ್ಯಕ್ಷ ನಿದರ್ಶನವಾಗಿದೆ ಎನ್ನುತ್ತಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಇರುವ  ದೂರದ ಊರಿನ ಮಂದಿ ಪ್ರತೀ ವರ್ಷ ಇಲ್ಲಿ ಸಂಗ್ರಹಿಸಿದ ವಿಭೂತಿಯನ್ನು  ಕೇಳಿ ಪಡೆಯುತ್ತಾರೆ.

ಅನೇಕ ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ. ಇಲ್ಲಿನ ವಿಭೂತಿಗೆ ವಿಶೇಷ ಶಕ್ತಿ ಇರುವುದು ಗಮನಿಸಿದ್ದೇವೆ. ಚರ್ಮ ರೋಗ ಸಹಿತ ವಿವಿಧ ರೋಗ ನಿವಾರಣೆಯಾದ್ದು ಅನುಭವಕ್ಕೆ ಬಂದಿದೆ.

 –  ವಿಷ್ಣು ಪ್ರಸಾದ್‌, ಅವಳ ಮಠ,  ಬಾಯಾರು

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

3 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

14 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

14 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

19 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

1 day ago