Advertisement
Exclusive - Mirror Hunt

ವಿಭೂತಿಗಾಗಿ ವರ್ಷಕ್ಕೊಮ್ಮೆ ಗುಹೆ ಪ್ರವೇಶ | ಬಾಯಾರಿನಲ್ಲಿ ವಿಶೇಷ ಆಚರಣೆ | ಬೆಳಕಿಲ್ಲದ ದಾರಿಯಲ್ಲಿ ಬೆಳಕು ತೋರುವ ವಿಶೇಷ ಶಕ್ತಿ….! |

Share

ವಿಭೂತಿಗಾಗಿ ಗುಹೆ ಪ್ರವೇಶ ಮಾಡುವ ವಿಶೇಷವಾದ ಆಚರಣೆ ಗಡಿನಾಡು ಜಿಲ್ಲೆ ಕಾಸರಗೋಡಿನ ಬಾಯಾರು ಬಳಿಯ ಪೊಸಡಿಗುಂಪೆಯಲ್ಲಿ  ನಡೆಯುತ್ತದೆ. ವರ್ಷಕ್ಕೊಮ್ಮೆ ಮಾತ್ರಾ ಈ ಗುಹೆಯನ್ನು ಊರ ಮಂದಿ ಪ್ರವೇಶ ಮಾಡುತ್ತಾರೆ.  ಬೆಳಕಿಲ್ಲದ ಅತೀ ಸಣ್ಣ ದಾರಿಯಲ್ಲಿ  ತೆವಳುತ್ತಾ, ಏಳುತ್ತಾ ಸುಮಾರು  500  ಮೀಟರ್‌ ದೂರ ಸಾಗಿ ಅಲ್ಲಿ ಸಿಗುವ ವಿಭೂತಿ, ಮಣ್ಣನ್ನು ತರುತ್ತಾರೆ. ಈ ವಿಭೂತಿಯಲ್ಲಿ ವಿಶೇಷ ಔಷಧೀಯ ಗುಣ ಇದೆ ಎಂದು ನಂಬಿಕೆ ಇದೆ. ಅನೇಕ ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ.

Advertisement
Advertisement
Advertisement
Advertisement
Advertisement
ಗುಹಾ ಪ್ರವೇಶದ ವಿಡಿಯೋ

 

Advertisement

ಬಾಯಾರು ಗ್ರಾಮದ ಪೊಸಡಿಗುಂಪೆಯ ತಪ್ಪಲಲ್ಲಿ  ಒಂದು ಗುಹೆ ಇದೆ. ಅನೇಕ ವರ್ಷಗಳಿಂದ ಇಲ್ಲೊಂದು ಆಚರಣೆ ನಡೆಯುತ್ತಿದೆ. ಇಲ್ಲಿನ ಊರ ಮಂದಿ ಪ್ರತೀ ವರ್ಷ ತೀರ್ಥ ಅಮವಾಸ್ಯೆಯಂದು ಈ ಗುಹೆಗೆ ಪ್ರವೇಶ ಮಾಡುತ್ತಾರೆ. 10-12  ಮಂದಿಯ 2-3 ತಂಡ ಆ ದಿನ ಇಡೀ ತಂಡ ತಂಡವಾಗಿ ತೆರಳಿ ಗುಹೆಯ ಒಳಗೆ ಸಿಗುವ ವಿಭೂತಿ ಅಥವಾ ಮಣ್ಣನ್ನು ತರುತ್ತಾರೆ. ಆ ಬಳಿಕ ಅದನ್ನು  ಒಣಗಿಸಿ ಭಸ್ಮ ಧಾರಣೆ ಅಥವಾ ಔಷಧೀಯವಾಗಿಯೂ ಬಳಕೆ ಮಾಡುತ್ತಾರೆ. ಅನೇಕ ವರ್ಷಗಳಿಂದ ಈ ಆಚರಣೆ ನಡೆದುಕೊಂಡು ಬಂದಿದೆ. ಐತಿಹಾಸಿಕವಾಗಿಯೂ ಪೊಸಡಿಗುಂಪೆಯ ಈ ಪ್ರದೇಶ ಮಹತ್ವ ಪಡೆದಿದೆ. ಗುಡ್ಡದ ತಪ್ಪಲಿಲ್ಲಿ ಈ ಗುಹೆ ಇದೆ. ವರ್ಷದಲ್ಲಿ  ಒಮ್ಮೆ ಮಾತ್ರಾ ಈ ಗುಹೆಯ ಒಳಗೆ ಪ್ರವೇಶ ಮಾಡುತ್ತಾರೆ. ಉಳಿದ ದಿನಗಳಲ್ಲಿ  ಈ ಗುಹೆಗೆ ಯಾರೂ ಪ್ರವೇಶ ಮಾಡುವುದಿಲ್ಲ, ಆ ದಿನಗಳಲ್ಲಿ  ಕಾಳಿಂಗ ಸರ್ಪ ಅಥವಾ ನಾಗರ ಹಾವು ಇರುತ್ತದೆ ಎನ್ನುವ ನಂಬಿಕೆ ಇದೆ.

Advertisement

ಈ ಗುಹೆ ಪ್ರವೇಶಕ್ಕೆ ಮುನ್ನ ಇಲ್ಲೇ ಹರಿಯುವ ತೊರೆಯಲ್ಲಿ  ತೀರ್ಥ ಸ್ನಾನ ಮಾಡಿದ ಬಳಿಕ ಧಾರ್ಮಿಮ ವಿಧಿ ವಿಧಾನಗಳ ನಂತರ ಗುಹೆ ಪ್ರವೇಶ ನಡೆಯುತ್ತದೆ. ಗುಹೆಯ ಒಳಗೆ ಪ್ರವೇಶ ಮಾಡಿ ಸುಮಾರು  500 ಮೀಟರ್‌ ದೂರ ತೆವಳುತ್ತಾ,  ಇಳಿಯುತ್ತಾ, ಏರುತ್ತಾ  ಸಾಗಿ ಅಲ್ಲಿ ಸಂಗ್ರಹ ನಡೆಯುತ್ತದೆ. ಈ ಹಿಂದೆ ತೆರಳಿದ ಮಂದಿಗೆ ವಿಭೂತಿ ತೆಗೆಯುವ ಪ್ರದೇಶದ ಬಗ್ಗೆ ಮಾಹಿತಿ ಇರುತ್ತದೆ. ಹೀಗಾಗಿ ಪ್ರತೀ ವರ್ಷ ಕನಿಷ್ಟ ಒಂದಿಬ್ಬರು ಹೊಸ ಯುವಕರೂ ವಿಭೂತಿ ಸಂಗ್ರಹಕ್ಕೆ ತೆರಳುತ್ತಾರೆ. ಸಂಪೂರ್ಣ ಕತ್ತಲೆಯಿಂದ ಆವೃತವಾಗಿರುವ ಗುಹಾ ಪ್ರವೇಶದ ಸಂದರ್ಭ ದೇವರ ಮೇಲಿನ ನಂಬಿಕೆ ಹಾಗೂ ಮುಂದೆ ಇರುವ ಹಿರಿಯರು ತೋರಿದ ದಾರಿಯೇ ದಾರಿದೀಪವಾಗುತ್ತದೆ ಇಲ್ಲಿ. 

Advertisement

Advertisement

ಇಲ್ಲಿಂದ ಅನತಿ ದೂರದಲ್ಲಿ  ಬಾಯಾರು ಪಂಚಲಿಂಗೇಶ್ವರ ದೇವಸ್ಥಾನ ಇದೆ. ಈ ದೇವಸ್ಥಾನದಲ್ಲಿ  ಕೊಪ್ಪರಿಗೆ ಏರಿದ ಬಳಿಕ ಅನೇಕ ಸಮಯಗಳವರೆಗೆ ಕೊಪ್ಪರಿಗೆ ಏರಿರುತ್ತದೆ, ಆ ದೇವರ ಪ್ರಸಾದದ ಒಲೆಯಿಂದಲೇ ಇಲ್ಲಿ  ಪ್ರಸಾದವಾಗಿ ವಿಭೂತಿ ದೊರೆಯುತ್ತದೆ ಎನ್ನುವುದು  ನಂಬಿಕೆ. ಈ ಗುಹೆಯಲ್ಲೂ ವಿವಿಧ ದಾರಿಗಳು ಕಾಣುತ್ತವೆ ಎಂದು ಗುಹೆ ಪ್ರವೇಶ ಮಾಡಿದ ಮಂದಿ ಹೇಳುತ್ತಾರೆ.

Advertisement

ಇಲ್ಲಿ  ಸಂಗ್ರಹ ಆಗುವ ವಿಭೂತಿಯ ಧಾರಣೆಯಿಂದ ಅಥವಾ ಪ್ರಸಾದ ತೆಗೆದುಕೊಳ್ಳುವುದರಿಂದ ಚರ್ಮ ವ್ಯಾಧಿಗಳು, ದೇಹದ ಇತರ ಕಾಯಿಲೆಗಳ ನಿವಾರಣೆಯಾಗುತ್ತದೆ ಎನ್ನುತ್ತಾರೆ ಸ್ಥಳೀಯರು. ಹಲವು ಮಂದಿಗೆ ಇದರ ಪ್ರತ್ಯಕ್ಷ ನಿದರ್ಶನವಾಗಿದೆ ಎನ್ನುತ್ತಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಇರುವ  ದೂರದ ಊರಿನ ಮಂದಿ ಪ್ರತೀ ವರ್ಷ ಇಲ್ಲಿ ಸಂಗ್ರಹಿಸಿದ ವಿಭೂತಿಯನ್ನು  ಕೇಳಿ ಪಡೆಯುತ್ತಾರೆ.

ಅನೇಕ ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ. ಇಲ್ಲಿನ ವಿಭೂತಿಗೆ ವಿಶೇಷ ಶಕ್ತಿ ಇರುವುದು ಗಮನಿಸಿದ್ದೇವೆ. ಚರ್ಮ ರೋಗ ಸಹಿತ ವಿವಿಧ ರೋಗ ನಿವಾರಣೆಯಾದ್ದು ಅನುಭವಕ್ಕೆ ಬಂದಿದೆ.
Advertisement

 –  ವಿಷ್ಣು ಪ್ರಸಾದ್‌, ಅವಳ ಮಠ,  ಬಾಯಾರು

 

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

12 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago