Advertisement
Exclusive - Mirror Hunt

ವಿಭೂತಿಗಾಗಿ ವರ್ಷಕ್ಕೊಮ್ಮೆ ಗುಹೆ ಪ್ರವೇಶ | ಬಾಯಾರಿನಲ್ಲಿ ವಿಶೇಷ ಆಚರಣೆ | ಬೆಳಕಿಲ್ಲದ ದಾರಿಯಲ್ಲಿ ಬೆಳಕು ತೋರುವ ವಿಶೇಷ ಶಕ್ತಿ….! |

Share

ವಿಭೂತಿಗಾಗಿ ಗುಹೆ ಪ್ರವೇಶ ಮಾಡುವ ವಿಶೇಷವಾದ ಆಚರಣೆ ಗಡಿನಾಡು ಜಿಲ್ಲೆ ಕಾಸರಗೋಡಿನ ಬಾಯಾರು ಬಳಿಯ ಪೊಸಡಿಗುಂಪೆಯಲ್ಲಿ  ನಡೆಯುತ್ತದೆ. ವರ್ಷಕ್ಕೊಮ್ಮೆ ಮಾತ್ರಾ ಈ ಗುಹೆಯನ್ನು ಊರ ಮಂದಿ ಪ್ರವೇಶ ಮಾಡುತ್ತಾರೆ.  ಬೆಳಕಿಲ್ಲದ ಅತೀ ಸಣ್ಣ ದಾರಿಯಲ್ಲಿ  ತೆವಳುತ್ತಾ, ಏಳುತ್ತಾ ಸುಮಾರು  500  ಮೀಟರ್‌ ದೂರ ಸಾಗಿ ಅಲ್ಲಿ ಸಿಗುವ ವಿಭೂತಿ, ಮಣ್ಣನ್ನು ತರುತ್ತಾರೆ. ಈ ವಿಭೂತಿಯಲ್ಲಿ ವಿಶೇಷ ಔಷಧೀಯ ಗುಣ ಇದೆ ಎಂದು ನಂಬಿಕೆ ಇದೆ. ಅನೇಕ ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ.

ಗುಹಾ ಪ್ರವೇಶದ ವಿಡಿಯೋ

 

ಬಾಯಾರು ಗ್ರಾಮದ ಪೊಸಡಿಗುಂಪೆಯ ತಪ್ಪಲಲ್ಲಿ  ಒಂದು ಗುಹೆ ಇದೆ. ಅನೇಕ ವರ್ಷಗಳಿಂದ ಇಲ್ಲೊಂದು ಆಚರಣೆ ನಡೆಯುತ್ತಿದೆ. ಇಲ್ಲಿನ ಊರ ಮಂದಿ ಪ್ರತೀ ವರ್ಷ ತೀರ್ಥ ಅಮವಾಸ್ಯೆಯಂದು ಈ ಗುಹೆಗೆ ಪ್ರವೇಶ ಮಾಡುತ್ತಾರೆ. 10-12  ಮಂದಿಯ 2-3 ತಂಡ ಆ ದಿನ ಇಡೀ ತಂಡ ತಂಡವಾಗಿ ತೆರಳಿ ಗುಹೆಯ ಒಳಗೆ ಸಿಗುವ ವಿಭೂತಿ ಅಥವಾ ಮಣ್ಣನ್ನು ತರುತ್ತಾರೆ. ಆ ಬಳಿಕ ಅದನ್ನು  ಒಣಗಿಸಿ ಭಸ್ಮ ಧಾರಣೆ ಅಥವಾ ಔಷಧೀಯವಾಗಿಯೂ ಬಳಕೆ ಮಾಡುತ್ತಾರೆ. ಅನೇಕ ವರ್ಷಗಳಿಂದ ಈ ಆಚರಣೆ ನಡೆದುಕೊಂಡು ಬಂದಿದೆ. ಐತಿಹಾಸಿಕವಾಗಿಯೂ ಪೊಸಡಿಗುಂಪೆಯ ಈ ಪ್ರದೇಶ ಮಹತ್ವ ಪಡೆದಿದೆ. ಗುಡ್ಡದ ತಪ್ಪಲಿಲ್ಲಿ ಈ ಗುಹೆ ಇದೆ. ವರ್ಷದಲ್ಲಿ  ಒಮ್ಮೆ ಮಾತ್ರಾ ಈ ಗುಹೆಯ ಒಳಗೆ ಪ್ರವೇಶ ಮಾಡುತ್ತಾರೆ. ಉಳಿದ ದಿನಗಳಲ್ಲಿ  ಈ ಗುಹೆಗೆ ಯಾರೂ ಪ್ರವೇಶ ಮಾಡುವುದಿಲ್ಲ, ಆ ದಿನಗಳಲ್ಲಿ  ಕಾಳಿಂಗ ಸರ್ಪ ಅಥವಾ ನಾಗರ ಹಾವು ಇರುತ್ತದೆ ಎನ್ನುವ ನಂಬಿಕೆ ಇದೆ.

ಈ ಗುಹೆ ಪ್ರವೇಶಕ್ಕೆ ಮುನ್ನ ಇಲ್ಲೇ ಹರಿಯುವ ತೊರೆಯಲ್ಲಿ  ತೀರ್ಥ ಸ್ನಾನ ಮಾಡಿದ ಬಳಿಕ ಧಾರ್ಮಿಮ ವಿಧಿ ವಿಧಾನಗಳ ನಂತರ ಗುಹೆ ಪ್ರವೇಶ ನಡೆಯುತ್ತದೆ. ಗುಹೆಯ ಒಳಗೆ ಪ್ರವೇಶ ಮಾಡಿ ಸುಮಾರು  500 ಮೀಟರ್‌ ದೂರ ತೆವಳುತ್ತಾ,  ಇಳಿಯುತ್ತಾ, ಏರುತ್ತಾ  ಸಾಗಿ ಅಲ್ಲಿ ಸಂಗ್ರಹ ನಡೆಯುತ್ತದೆ. ಈ ಹಿಂದೆ ತೆರಳಿದ ಮಂದಿಗೆ ವಿಭೂತಿ ತೆಗೆಯುವ ಪ್ರದೇಶದ ಬಗ್ಗೆ ಮಾಹಿತಿ ಇರುತ್ತದೆ. ಹೀಗಾಗಿ ಪ್ರತೀ ವರ್ಷ ಕನಿಷ್ಟ ಒಂದಿಬ್ಬರು ಹೊಸ ಯುವಕರೂ ವಿಭೂತಿ ಸಂಗ್ರಹಕ್ಕೆ ತೆರಳುತ್ತಾರೆ. ಸಂಪೂರ್ಣ ಕತ್ತಲೆಯಿಂದ ಆವೃತವಾಗಿರುವ ಗುಹಾ ಪ್ರವೇಶದ ಸಂದರ್ಭ ದೇವರ ಮೇಲಿನ ನಂಬಿಕೆ ಹಾಗೂ ಮುಂದೆ ಇರುವ ಹಿರಿಯರು ತೋರಿದ ದಾರಿಯೇ ದಾರಿದೀಪವಾಗುತ್ತದೆ ಇಲ್ಲಿ. 

ಇಲ್ಲಿಂದ ಅನತಿ ದೂರದಲ್ಲಿ  ಬಾಯಾರು ಪಂಚಲಿಂಗೇಶ್ವರ ದೇವಸ್ಥಾನ ಇದೆ. ಈ ದೇವಸ್ಥಾನದಲ್ಲಿ  ಕೊಪ್ಪರಿಗೆ ಏರಿದ ಬಳಿಕ ಅನೇಕ ಸಮಯಗಳವರೆಗೆ ಕೊಪ್ಪರಿಗೆ ಏರಿರುತ್ತದೆ, ಆ ದೇವರ ಪ್ರಸಾದದ ಒಲೆಯಿಂದಲೇ ಇಲ್ಲಿ  ಪ್ರಸಾದವಾಗಿ ವಿಭೂತಿ ದೊರೆಯುತ್ತದೆ ಎನ್ನುವುದು  ನಂಬಿಕೆ. ಈ ಗುಹೆಯಲ್ಲೂ ವಿವಿಧ ದಾರಿಗಳು ಕಾಣುತ್ತವೆ ಎಂದು ಗುಹೆ ಪ್ರವೇಶ ಮಾಡಿದ ಮಂದಿ ಹೇಳುತ್ತಾರೆ.

ಇಲ್ಲಿ  ಸಂಗ್ರಹ ಆಗುವ ವಿಭೂತಿಯ ಧಾರಣೆಯಿಂದ ಅಥವಾ ಪ್ರಸಾದ ತೆಗೆದುಕೊಳ್ಳುವುದರಿಂದ ಚರ್ಮ ವ್ಯಾಧಿಗಳು, ದೇಹದ ಇತರ ಕಾಯಿಲೆಗಳ ನಿವಾರಣೆಯಾಗುತ್ತದೆ ಎನ್ನುತ್ತಾರೆ ಸ್ಥಳೀಯರು. ಹಲವು ಮಂದಿಗೆ ಇದರ ಪ್ರತ್ಯಕ್ಷ ನಿದರ್ಶನವಾಗಿದೆ ಎನ್ನುತ್ತಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಇರುವ  ದೂರದ ಊರಿನ ಮಂದಿ ಪ್ರತೀ ವರ್ಷ ಇಲ್ಲಿ ಸಂಗ್ರಹಿಸಿದ ವಿಭೂತಿಯನ್ನು  ಕೇಳಿ ಪಡೆಯುತ್ತಾರೆ.

ಅನೇಕ ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ. ಇಲ್ಲಿನ ವಿಭೂತಿಗೆ ವಿಶೇಷ ಶಕ್ತಿ ಇರುವುದು ಗಮನಿಸಿದ್ದೇವೆ. ಚರ್ಮ ರೋಗ ಸಹಿತ ವಿವಿಧ ರೋಗ ನಿವಾರಣೆಯಾದ್ದು ಅನುಭವಕ್ಕೆ ಬಂದಿದೆ.

 –  ವಿಷ್ಣು ಪ್ರಸಾದ್‌, ಅವಳ ಮಠ,  ಬಾಯಾರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

6 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

15 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

20 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

21 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago