Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |

Share

ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಸಲ್ಪಡುವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗಿಯಾಗಿರುವುದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವುದಕ್ಕೆ ಕಾರಣವಾಗಿದೆ. ಆ ವಿಡಿಯೋದಲ್ಲಿ ವಿದ್ಯಾರ್ಥಿಗಳ ಹುಚ್ಚಾಟ ಕಾಲೇಜು ಆವರಣದಲ್ಲಿಯೇ ನಡೆದಿರುವಂತೆ ಕಂಡುಬಂದಿದ್ದು, ಯೂನಿಫಾರಂ ಹರಿಯುವುದು ಸೇರಿದಂತೆ ಮಳೆ ನೀರಿನಲ್ಲಿ ಹುಚ್ಚಾಟ ಮಾಡುವ ರೀಲ್ಸ್‌ ಈಗ ವೈರಲ್‌ ಆಗಿರುವುದು.

ಈಚೆಗಷ್ಟೇ ಪುತ್ತೂರಿನಲ್ಲಿ ವಿದ್ಯಾರ್ಥಿಗಳ ಪ್ರೇಮಪ್ರಕರಣವೊಂದು ಭಾರೀ ಚರ್ಚೆಯಲ್ಲಿ ಇರುವಾಗಲೇ ಕುಕ್ಕೆ ಸುಬ್ರಹ್ಮಣ್ಯದ ಪದವಿ ಕಾಲೇಜಿನ ವಿದ್ಯಾರ್ಥಿಗಳ ರೀಲ್ಸ್‌ ವೈರಲ್‌ ಆಗಿರುವುದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುವುದಕ್ಕೆ ಕಾರಣವಾಗಿರುವುದು. ಬಹಳ ಸುಂದರವಾದ ಚಿತ್ರೀಕರಣ ಹಾಗೂ ಎಡಿಟಿಂಗ್‌ ಮಾಡಿದ್ದಾರೆ ವಿದ್ಯಾರ್ಥಿಗಳು. ಈ ವಿಡಿಯೋದಲ್ಲಿ ಕಾಲೇಜು ಗೇಟಿನ ಹೊರಭಾಗದಲ್ಲಿ ನಮಿಸುವುದರಿಂದ ತೊಡಗಿ ಮಳೆಯಲ್ಲಿ ಆಟಗಳು, ಕಾಲೇಜು ಯೂನಿಫಾರಂ ಹರಿದು ನರ್ತಿಸುವ ದೃಶ್ಯಗಳೂ ಇದೆ. ಈ ಎಲ್ಲಾ ಹುಚ್ಚಾಟಗಳು ಕಾಲೇಜು ಆವರಣದಲ್ಲಿಯೇ ನಡೆದಿರುವಂತೆ ಕಾಣಿಸುತ್ತಿದೆ. ಹೀಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವುದು ಹಾಗೂ ತೀವ್ರ ವಿರೋಧಕ್ಕೂ ಕಾರಣವಾಗಿರುವುದು.ಗ್ರಾಮೀಣ ಭಾಗದಲ್ಲಿ ಅದರಲ್ಲೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ವತಿಯಿಂದ ನಡೆಸಲ್ಪಡುವ ಕಾಲೇಜಿನಲ್ಲಿ ಈ ಘಟನೆ ನಡೆದಿರುವುದು ವಿಷಾದದ ಸಂಗತಿ. ನಗರದಲ್ಲಿ ವಿದ್ಯಾರ್ಥಿಗಳು ರೀಲ್ಸ್‌ ಹುಚ್ಚಾಟ ನಡೆಸುವುದು ಇದೆ, ಆದರೆ ಪ್ರಶಾಂತವಾದ ,ಕಲಿಕೆಗೆ ಪೂರಕವಾಗಿರುವ ಪ್ರದೇಶದಲ್ಲಿ ರೀಲ್ಸ್‌ ಹುಚ್ಚಾಟ ಆಘಾತಕಾರಿ ಸಂಗತಿಯಾಗಿದೆ. ಕೆಲವು ಸಮಯದ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಇದೇ ಕಾಲೇಜು ವಿದ್ಯಾರ್ಥಿಗಳು ಬಿಸಲೆ ಪ್ರದೇಶದಲ್ಲಿ ನಡೆಸಿರುವ ಘಟನೆಗಳೂ ಈಗ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗಿದೆ. ಗ್ರಾಮೀಣ ಭಾಗದಲ್ಲೂ ಪೋಷಕರು ವಿದ್ಯಾರ್ಥಿಗಳು ನಿತ್ಯದ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕಾದ ಅಗತ್ಯವೂ ಇಲ್ಲಿ ಕಾಣುತ್ತದೆ.

ಈ ಬಗ್ಗೆ ಆಡಳಿತವು ಗಮನಹರಿಸುವುದು ಮಾತ್ರವಲ್ಲ, ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಉತ್ತಮವಾದ ಶಿಕ್ಷಣ ಸಂಸ್ಥೆ, ಪದವಿ ಯಂತಹ ಶಿಕ್ಷಣಕ್ಕೆ ಧಾರ್ಮಿಕ ಸಂಸ್ಥೆ ಆದ್ಯತೆ ಇರುವುದು ಗಮನಿಸಬೇಕಾದ ಅಂಶ.  ಆದರೆ ಅಂತಹ ಉದ್ದೇಶವನ್ನು ವಿದ್ಯಾರ್ಥಿಗಳು ದುರುಪಯೋಗಪಡಿಸಿಕೊಳ್ಳುವುದು ಶಿಕ್ಷಣ ಸಂಸ್ಥೆಗೂ ಕಳಂಕದ ಕೆಲಸ. ಹೀಗಾಗಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಅಗತ್ಯವಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ನಡೆದಿವೆ. ( ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರೀಲ್ಸ್‌ ನಾವು ಪ್ರಕಟ ಮಾಡುತ್ತಿಲ್ಲ , ಆದರೆ ಇಂತಹ ಘಟನೆಗಳು ನಡೆಯಬಾರದು ಎಚ್ಚರವಾಗಿರಬೇಕು ಎನ್ನುವುದು ನಮ್ಮ ಕಾಳಜಿ, ಈ ದೃಷ್ಟಿಯಿಂದ ಸೋಶಿಯಲ್‌ ಮೀಡಿಯಾದಲ್ಲಿ ಬರುತ್ತಿರುವ ಅಭಿಪ್ರಾಯಗಳಿಗೆ ಮಾನ್ಯತೆ ನೀಡಿದ್ದೇವೆ – ರೂರಲ್‌ ಮಿರರ್.ಕಾಂ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

23 minutes ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

1 hour ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

7 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

8 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

10 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

11 hours ago