Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |

Share

ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಸಲ್ಪಡುವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗಿಯಾಗಿರುವುದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವುದಕ್ಕೆ ಕಾರಣವಾಗಿದೆ. ಆ ವಿಡಿಯೋದಲ್ಲಿ ವಿದ್ಯಾರ್ಥಿಗಳ ಹುಚ್ಚಾಟ ಕಾಲೇಜು ಆವರಣದಲ್ಲಿಯೇ ನಡೆದಿರುವಂತೆ ಕಂಡುಬಂದಿದ್ದು, ಯೂನಿಫಾರಂ ಹರಿಯುವುದು ಸೇರಿದಂತೆ ಮಳೆ ನೀರಿನಲ್ಲಿ ಹುಚ್ಚಾಟ ಮಾಡುವ ರೀಲ್ಸ್‌ ಈಗ ವೈರಲ್‌ ಆಗಿರುವುದು.

ಈಚೆಗಷ್ಟೇ ಪುತ್ತೂರಿನಲ್ಲಿ ವಿದ್ಯಾರ್ಥಿಗಳ ಪ್ರೇಮಪ್ರಕರಣವೊಂದು ಭಾರೀ ಚರ್ಚೆಯಲ್ಲಿ ಇರುವಾಗಲೇ ಕುಕ್ಕೆ ಸುಬ್ರಹ್ಮಣ್ಯದ ಪದವಿ ಕಾಲೇಜಿನ ವಿದ್ಯಾರ್ಥಿಗಳ ರೀಲ್ಸ್‌ ವೈರಲ್‌ ಆಗಿರುವುದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುವುದಕ್ಕೆ ಕಾರಣವಾಗಿರುವುದು. ಬಹಳ ಸುಂದರವಾದ ಚಿತ್ರೀಕರಣ ಹಾಗೂ ಎಡಿಟಿಂಗ್‌ ಮಾಡಿದ್ದಾರೆ ವಿದ್ಯಾರ್ಥಿಗಳು. ಈ ವಿಡಿಯೋದಲ್ಲಿ ಕಾಲೇಜು ಗೇಟಿನ ಹೊರಭಾಗದಲ್ಲಿ ನಮಿಸುವುದರಿಂದ ತೊಡಗಿ ಮಳೆಯಲ್ಲಿ ಆಟಗಳು, ಕಾಲೇಜು ಯೂನಿಫಾರಂ ಹರಿದು ನರ್ತಿಸುವ ದೃಶ್ಯಗಳೂ ಇದೆ. ಈ ಎಲ್ಲಾ ಹುಚ್ಚಾಟಗಳು ಕಾಲೇಜು ಆವರಣದಲ್ಲಿಯೇ ನಡೆದಿರುವಂತೆ ಕಾಣಿಸುತ್ತಿದೆ. ಹೀಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವುದು ಹಾಗೂ ತೀವ್ರ ವಿರೋಧಕ್ಕೂ ಕಾರಣವಾಗಿರುವುದು.ಗ್ರಾಮೀಣ ಭಾಗದಲ್ಲಿ ಅದರಲ್ಲೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ವತಿಯಿಂದ ನಡೆಸಲ್ಪಡುವ ಕಾಲೇಜಿನಲ್ಲಿ ಈ ಘಟನೆ ನಡೆದಿರುವುದು ವಿಷಾದದ ಸಂಗತಿ. ನಗರದಲ್ಲಿ ವಿದ್ಯಾರ್ಥಿಗಳು ರೀಲ್ಸ್‌ ಹುಚ್ಚಾಟ ನಡೆಸುವುದು ಇದೆ, ಆದರೆ ಪ್ರಶಾಂತವಾದ ,ಕಲಿಕೆಗೆ ಪೂರಕವಾಗಿರುವ ಪ್ರದೇಶದಲ್ಲಿ ರೀಲ್ಸ್‌ ಹುಚ್ಚಾಟ ಆಘಾತಕಾರಿ ಸಂಗತಿಯಾಗಿದೆ. ಕೆಲವು ಸಮಯದ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಇದೇ ಕಾಲೇಜು ವಿದ್ಯಾರ್ಥಿಗಳು ಬಿಸಲೆ ಪ್ರದೇಶದಲ್ಲಿ ನಡೆಸಿರುವ ಘಟನೆಗಳೂ ಈಗ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗಿದೆ. ಗ್ರಾಮೀಣ ಭಾಗದಲ್ಲೂ ಪೋಷಕರು ವಿದ್ಯಾರ್ಥಿಗಳು ನಿತ್ಯದ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕಾದ ಅಗತ್ಯವೂ ಇಲ್ಲಿ ಕಾಣುತ್ತದೆ.

ಈ ಬಗ್ಗೆ ಆಡಳಿತವು ಗಮನಹರಿಸುವುದು ಮಾತ್ರವಲ್ಲ, ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಉತ್ತಮವಾದ ಶಿಕ್ಷಣ ಸಂಸ್ಥೆ, ಪದವಿ ಯಂತಹ ಶಿಕ್ಷಣಕ್ಕೆ ಧಾರ್ಮಿಕ ಸಂಸ್ಥೆ ಆದ್ಯತೆ ಇರುವುದು ಗಮನಿಸಬೇಕಾದ ಅಂಶ.  ಆದರೆ ಅಂತಹ ಉದ್ದೇಶವನ್ನು ವಿದ್ಯಾರ್ಥಿಗಳು ದುರುಪಯೋಗಪಡಿಸಿಕೊಳ್ಳುವುದು ಶಿಕ್ಷಣ ಸಂಸ್ಥೆಗೂ ಕಳಂಕದ ಕೆಲಸ. ಹೀಗಾಗಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಅಗತ್ಯವಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ನಡೆದಿವೆ. ( ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರೀಲ್ಸ್‌ ನಾವು ಪ್ರಕಟ ಮಾಡುತ್ತಿಲ್ಲ , ಆದರೆ ಇಂತಹ ಘಟನೆಗಳು ನಡೆಯಬಾರದು ಎಚ್ಚರವಾಗಿರಬೇಕು ಎನ್ನುವುದು ನಮ್ಮ ಕಾಳಜಿ, ಈ ದೃಷ್ಟಿಯಿಂದ ಸೋಶಿಯಲ್‌ ಮೀಡಿಯಾದಲ್ಲಿ ಬರುತ್ತಿರುವ ಅಭಿಪ್ರಾಯಗಳಿಗೆ ಮಾನ್ಯತೆ ನೀಡಿದ್ದೇವೆ – ರೂರಲ್‌ ಮಿರರ್.ಕಾಂ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

20 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago