Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |

Share

ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಸಲ್ಪಡುವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗಿಯಾಗಿರುವುದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವುದಕ್ಕೆ ಕಾರಣವಾಗಿದೆ. ಆ ವಿಡಿಯೋದಲ್ಲಿ ವಿದ್ಯಾರ್ಥಿಗಳ ಹುಚ್ಚಾಟ ಕಾಲೇಜು ಆವರಣದಲ್ಲಿಯೇ ನಡೆದಿರುವಂತೆ ಕಂಡುಬಂದಿದ್ದು, ಯೂನಿಫಾರಂ ಹರಿಯುವುದು ಸೇರಿದಂತೆ ಮಳೆ ನೀರಿನಲ್ಲಿ ಹುಚ್ಚಾಟ ಮಾಡುವ ರೀಲ್ಸ್‌ ಈಗ ವೈರಲ್‌ ಆಗಿರುವುದು.

ಈಚೆಗಷ್ಟೇ ಪುತ್ತೂರಿನಲ್ಲಿ ವಿದ್ಯಾರ್ಥಿಗಳ ಪ್ರೇಮಪ್ರಕರಣವೊಂದು ಭಾರೀ ಚರ್ಚೆಯಲ್ಲಿ ಇರುವಾಗಲೇ ಕುಕ್ಕೆ ಸುಬ್ರಹ್ಮಣ್ಯದ ಪದವಿ ಕಾಲೇಜಿನ ವಿದ್ಯಾರ್ಥಿಗಳ ರೀಲ್ಸ್‌ ವೈರಲ್‌ ಆಗಿರುವುದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುವುದಕ್ಕೆ ಕಾರಣವಾಗಿರುವುದು. ಬಹಳ ಸುಂದರವಾದ ಚಿತ್ರೀಕರಣ ಹಾಗೂ ಎಡಿಟಿಂಗ್‌ ಮಾಡಿದ್ದಾರೆ ವಿದ್ಯಾರ್ಥಿಗಳು. ಈ ವಿಡಿಯೋದಲ್ಲಿ ಕಾಲೇಜು ಗೇಟಿನ ಹೊರಭಾಗದಲ್ಲಿ ನಮಿಸುವುದರಿಂದ ತೊಡಗಿ ಮಳೆಯಲ್ಲಿ ಆಟಗಳು, ಕಾಲೇಜು ಯೂನಿಫಾರಂ ಹರಿದು ನರ್ತಿಸುವ ದೃಶ್ಯಗಳೂ ಇದೆ. ಈ ಎಲ್ಲಾ ಹುಚ್ಚಾಟಗಳು ಕಾಲೇಜು ಆವರಣದಲ್ಲಿಯೇ ನಡೆದಿರುವಂತೆ ಕಾಣಿಸುತ್ತಿದೆ. ಹೀಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವುದು ಹಾಗೂ ತೀವ್ರ ವಿರೋಧಕ್ಕೂ ಕಾರಣವಾಗಿರುವುದು.ಗ್ರಾಮೀಣ ಭಾಗದಲ್ಲಿ ಅದರಲ್ಲೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ವತಿಯಿಂದ ನಡೆಸಲ್ಪಡುವ ಕಾಲೇಜಿನಲ್ಲಿ ಈ ಘಟನೆ ನಡೆದಿರುವುದು ವಿಷಾದದ ಸಂಗತಿ. ನಗರದಲ್ಲಿ ವಿದ್ಯಾರ್ಥಿಗಳು ರೀಲ್ಸ್‌ ಹುಚ್ಚಾಟ ನಡೆಸುವುದು ಇದೆ, ಆದರೆ ಪ್ರಶಾಂತವಾದ ,ಕಲಿಕೆಗೆ ಪೂರಕವಾಗಿರುವ ಪ್ರದೇಶದಲ್ಲಿ ರೀಲ್ಸ್‌ ಹುಚ್ಚಾಟ ಆಘಾತಕಾರಿ ಸಂಗತಿಯಾಗಿದೆ. ಕೆಲವು ಸಮಯದ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಇದೇ ಕಾಲೇಜು ವಿದ್ಯಾರ್ಥಿಗಳು ಬಿಸಲೆ ಪ್ರದೇಶದಲ್ಲಿ ನಡೆಸಿರುವ ಘಟನೆಗಳೂ ಈಗ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗಿದೆ. ಗ್ರಾಮೀಣ ಭಾಗದಲ್ಲೂ ಪೋಷಕರು ವಿದ್ಯಾರ್ಥಿಗಳು ನಿತ್ಯದ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕಾದ ಅಗತ್ಯವೂ ಇಲ್ಲಿ ಕಾಣುತ್ತದೆ.

ಈ ಬಗ್ಗೆ ಆಡಳಿತವು ಗಮನಹರಿಸುವುದು ಮಾತ್ರವಲ್ಲ, ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಉತ್ತಮವಾದ ಶಿಕ್ಷಣ ಸಂಸ್ಥೆ, ಪದವಿ ಯಂತಹ ಶಿಕ್ಷಣಕ್ಕೆ ಧಾರ್ಮಿಕ ಸಂಸ್ಥೆ ಆದ್ಯತೆ ಇರುವುದು ಗಮನಿಸಬೇಕಾದ ಅಂಶ.  ಆದರೆ ಅಂತಹ ಉದ್ದೇಶವನ್ನು ವಿದ್ಯಾರ್ಥಿಗಳು ದುರುಪಯೋಗಪಡಿಸಿಕೊಳ್ಳುವುದು ಶಿಕ್ಷಣ ಸಂಸ್ಥೆಗೂ ಕಳಂಕದ ಕೆಲಸ. ಹೀಗಾಗಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಅಗತ್ಯವಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ನಡೆದಿವೆ. ( ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರೀಲ್ಸ್‌ ನಾವು ಪ್ರಕಟ ಮಾಡುತ್ತಿಲ್ಲ , ಆದರೆ ಇಂತಹ ಘಟನೆಗಳು ನಡೆಯಬಾರದು ಎಚ್ಚರವಾಗಿರಬೇಕು ಎನ್ನುವುದು ನಮ್ಮ ಕಾಳಜಿ, ಈ ದೃಷ್ಟಿಯಿಂದ ಸೋಶಿಯಲ್‌ ಮೀಡಿಯಾದಲ್ಲಿ ಬರುತ್ತಿರುವ ಅಭಿಪ್ರಾಯಗಳಿಗೆ ಮಾನ್ಯತೆ ನೀಡಿದ್ದೇವೆ – ರೂರಲ್‌ ಮಿರರ್.ಕಾಂ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

1 hour ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

1 hour ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

10 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

11 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

17 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

18 hours ago