ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.
ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…