ಬೆಂಗಳೂರು ಗಾಯನ ಸಮಾಜ ನೀಡುವ ‘ಶ್ರೀ ಕಲಾಜ್ಯೋತಿ ಪ್ರಶಸ್ತಿ’ಗೆ ವಿದುಷಿ ಶಂಕರಿಮೂರ್ತಿ , ಬಾಳಿಲ ಆಯ್ಕೆಯಾಗಿದ್ದಾರೆ. ಕೆ. ಆರ್ ರಸ್ತೆಯ ಗಾಯನ ಸಮಾಜ ಸಭಾಂಗಣದಲ್ಲಿ ನವೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸುವರು.
ಇದೇ ಸಂದರ್ಭದಲ್ಲಿ ವೀಣಾವಾದಕ ವಿದ್ವಾನ್ ಆರ್. ಕೆ ಶಂಕರ್, ಮೃದಂಗ ವಾದಕ ವಿದ್ವಾನ್ ಎನ್. ವಾಸುದೇವ, ಪಿಟೀಲು ವಾದಕ ವಿದ್ವಾನ್ ಕೊಳ್ಳೇಗಾಲ ಗೋಪಾಲಕೃಷ್ಣ ಅವರಿಗೂ ಶ್ರೀಕಲಾ ಜ್ಯೋತಿ ಪ್ರಶಸ್ತಿ ನೀಡಲಾಗುವುದು. 54ನೇ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಎಲ್ಲ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಅವರು ವಿದ್ವಾನ್ ಡಾ ಎಸ್ . ಸಿ. ಶರ್ಮ ಅವರಿಗೆ ‘ಸಂಗೀತ ಕಲಾರತ್ನ’ ಪ್ರಶಸ್ತಿ, ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯ ಅವರಿಗೆ ‘ಕರ್ನಾಟಕ ಕಲಾಚಾರ್ಯ’ ಪ್ರಶಸ್ತಿ ಪ್ರದಾನ ಮಾಡುವರು.
ಇದೇ ಸಂದರ್ಭದಲ್ಲಿ ಎಂ. ಎ . ಮೀರಾ ಅವರಿಗೆ ‘ಸ್ವರ ಭೂಷಿಣಿ’ ಪ್ರಶಸ್ತಿ, ಶ್ರೀಮತಿ ಗೀತಾ ಸೀತಾರಾಮ ಅವರಿಗೆ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗುವುದು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…
ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…
ರಾಜಧಾನಿ ಬೆಂಗಳೂರು ಸೇರಿದಂತೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು, ಬೃಹತ್ ಬೆಂಗಳೂರು…
21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490