ಬೆಂಗಳೂರು ಗಾಯನ ಸಮಾಜ ನೀಡುವ ‘ಶ್ರೀ ಕಲಾಜ್ಯೋತಿ ಪ್ರಶಸ್ತಿ’ಗೆ ವಿದುಷಿ ಶಂಕರಿಮೂರ್ತಿ , ಬಾಳಿಲ ಆಯ್ಕೆಯಾಗಿದ್ದಾರೆ. ಕೆ. ಆರ್ ರಸ್ತೆಯ ಗಾಯನ ಸಮಾಜ ಸಭಾಂಗಣದಲ್ಲಿ ನವೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸುವರು.
ಇದೇ ಸಂದರ್ಭದಲ್ಲಿ ವೀಣಾವಾದಕ ವಿದ್ವಾನ್ ಆರ್. ಕೆ ಶಂಕರ್, ಮೃದಂಗ ವಾದಕ ವಿದ್ವಾನ್ ಎನ್. ವಾಸುದೇವ, ಪಿಟೀಲು ವಾದಕ ವಿದ್ವಾನ್ ಕೊಳ್ಳೇಗಾಲ ಗೋಪಾಲಕೃಷ್ಣ ಅವರಿಗೂ ಶ್ರೀಕಲಾ ಜ್ಯೋತಿ ಪ್ರಶಸ್ತಿ ನೀಡಲಾಗುವುದು. 54ನೇ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಎಲ್ಲ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಅವರು ವಿದ್ವಾನ್ ಡಾ ಎಸ್ . ಸಿ. ಶರ್ಮ ಅವರಿಗೆ ‘ಸಂಗೀತ ಕಲಾರತ್ನ’ ಪ್ರಶಸ್ತಿ, ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯ ಅವರಿಗೆ ‘ಕರ್ನಾಟಕ ಕಲಾಚಾರ್ಯ’ ಪ್ರಶಸ್ತಿ ಪ್ರದಾನ ಮಾಡುವರು.
ಇದೇ ಸಂದರ್ಭದಲ್ಲಿ ಎಂ. ಎ . ಮೀರಾ ಅವರಿಗೆ ‘ಸ್ವರ ಭೂಷಿಣಿ’ ಪ್ರಶಸ್ತಿ, ಶ್ರೀಮತಿ ಗೀತಾ ಸೀತಾರಾಮ ಅವರಿಗೆ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗುವುದು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…