ಬೆಂಗಳೂರು ಗಾಯನ ಸಮಾಜ ನೀಡುವ ‘ಶ್ರೀ ಕಲಾಜ್ಯೋತಿ ಪ್ರಶಸ್ತಿ’ಗೆ ವಿದುಷಿ ಶಂಕರಿಮೂರ್ತಿ , ಬಾಳಿಲ ಆಯ್ಕೆಯಾಗಿದ್ದಾರೆ. ಕೆ. ಆರ್ ರಸ್ತೆಯ ಗಾಯನ ಸಮಾಜ ಸಭಾಂಗಣದಲ್ಲಿ ನವೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸುವರು.
ಇದೇ ಸಂದರ್ಭದಲ್ಲಿ ವೀಣಾವಾದಕ ವಿದ್ವಾನ್ ಆರ್. ಕೆ ಶಂಕರ್, ಮೃದಂಗ ವಾದಕ ವಿದ್ವಾನ್ ಎನ್. ವಾಸುದೇವ, ಪಿಟೀಲು ವಾದಕ ವಿದ್ವಾನ್ ಕೊಳ್ಳೇಗಾಲ ಗೋಪಾಲಕೃಷ್ಣ ಅವರಿಗೂ ಶ್ರೀಕಲಾ ಜ್ಯೋತಿ ಪ್ರಶಸ್ತಿ ನೀಡಲಾಗುವುದು. 54ನೇ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಎಲ್ಲ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಅವರು ವಿದ್ವಾನ್ ಡಾ ಎಸ್ . ಸಿ. ಶರ್ಮ ಅವರಿಗೆ ‘ಸಂಗೀತ ಕಲಾರತ್ನ’ ಪ್ರಶಸ್ತಿ, ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯ ಅವರಿಗೆ ‘ಕರ್ನಾಟಕ ಕಲಾಚಾರ್ಯ’ ಪ್ರಶಸ್ತಿ ಪ್ರದಾನ ಮಾಡುವರು.
ಇದೇ ಸಂದರ್ಭದಲ್ಲಿ ಎಂ. ಎ . ಮೀರಾ ಅವರಿಗೆ ‘ಸ್ವರ ಭೂಷಿಣಿ’ ಪ್ರಶಸ್ತಿ, ಶ್ರೀಮತಿ ಗೀತಾ ಸೀತಾರಾಮ ಅವರಿಗೆ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗುವುದು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…