Advertisement
ಸುದ್ದಿಗಳು

ಸುಳ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗ ಸಂದರ್ಶನಗಳ ಮಾಹಿತಿ | ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಣಿ ಪ್ರಾರಂಭ

Share

ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ 15/10/2೦23 ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್/ ಕೆಎಎಸ್/ ಬ್ಯಾಂಕಿಂಗ್/ ಎಸ್.ಡಿ .ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜೊತೆಗೆ ನೇಮಕಾತಿಗಳ ವಿವರ , ಪ್ರಶ್ನೆಪತ್ರಿಕೆಗಳ ಸ್ವರೂಪ – ಪರೀಕ್ಷೆಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ ಸುಳ್ಯ ಶಾಖೆಯಲ್ಲಿ ಉಚಿತ ಮಾಹಿತಿ ಕಾರ್ಯಗಾರದ ಮೂಲಕ ನೀಡಲಿದೆ.

ಅಲ್ಲದೇ ಖಾಸಗಿ ಉದ್ಯೋಗಗಳಿಗೆ ಪ್ರಯತ್ನಿಸುವವರಿಗಾಗಿ ಕಂಪನಿಗಳ ನೇರ ಸಂದರ್ಶನವನ್ನು ಎದುರಿಸುವ ಬಗ್ಗೆ ಉದ್ಯೋಗ ಕೌಶಲ್ಯತೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಲಾಗುವುದು.

ವಿದ್ಯಾಮಾತಾ ಅಕಾಡೆಮಿಯು ಸುಳ್ಯದಲ್ಲಿ ನೂತನವಾಗಿ ಶಾಖೆಯನ್ನು ಪ್ರಾರಂಭಿಸಿದ್ದು ಬ್ಯಾಂಕಿಂಗ್, ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ನೂರಾರು ಅಭ್ಯರ್ಥಿಗಳು ತರಬೇತಿಯನ್ನು ಪಡೆದು ಸೇರಿರುವುದನ್ನು ಸ್ಮರಿಸಿಕೊಳ್ಳಬಹುದು. ಇದೀಗ ಸುಳ್ಯ, ಕೊಡಗು, ಕಾಸರಗೋಡು ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಉದ್ಯೋಗಗಳಿಗೆ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕೆಂಬ ಯೋಜನೆಯೊಂದಿಗೆ ಉಚಿತ ಕಾರ್ಯಗಾರವನ್ನು ಆಯೋಜಿಸಲಾಗಿದೆ. ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳು 12/10/2023 ರ ಒಳಗಾಗಿ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ (ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದಕ್ಷಿಣ ಕನ್ನಡ) ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.ಇಲ್ಲವೇ , 9448527606 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

6 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

12 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

12 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

23 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

23 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago