Advertisement
ಉದ್ಯೋಗ ಮಾಹಿತಿ

ವಿದ್ಯಾಮಾತಾ ಪೌಂಡೇಶನ್ ವತಿಯಿಂದ ರಾಜ್ಯಮಟ್ಟದ ಉದ್ಯೋಗ ಮೇಳ | 2 ಸಾವಿರಕ್ಕೂ ಹೆಚ್ಚಿನ ನೋಂದಣಿ |

Share

ವಿದ್ಯಾಮಾತಾ ಫೌಂಡೇಶನ್ ವತಿಯಿಂದ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾವಣೆಯನ್ನು ಕಳೆದ 10 ದಿನಗಳ ಹಿಂದೆ ಪ್ರಾರಂಭಿಸಲಾಗಿದ್ದು 2 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಈಗಾಗಲೇ ನೋಂದಾವಣೆಯನ್ನು ಮಾಡಿದ್ದಾರೆ.

Advertisement
Advertisement

9772294246 ನಂಬರಿಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಾವಣೆ ಪ್ರಾರಂಭವಾಗಿದ್ದು ಆಸಕ್ತರು ಈ ನಂಬರ್ ಗೆ ಮಿಸ್ ಕಾಲ್ ಕೊಡುವುದರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಮಿಸ್ ಕಾಲ್ ಕೊಟ್ಟು ನೋಂದಾವಣೆ ಮಾಡುವವರಿಗೆ 10 ದಿನದ ಒಳಗಾಗಿ ವಿದ್ಯಾಮಾತಾ ಫೌಂಡೇಶನ್ ಮೂಲಕ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುವುದು.

ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚಿನ ವಿವಿಧ ಕ್ಷೇತ್ರದ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ ಯಿಂದ ಐ.ಟಿ.ಐ., ಪಿ.ಯು.ಸಿ , ಡಿಪ್ಲೊಮಾ, ಪದವಿ , ಸ್ನಾತಕೋತ್ತರ ಪದವಿ ಮುಗಿಸಿರುವ ಅಥವಾ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗುವುದು.

ಉದ್ಯೋಗ ಮೇಳವು ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದ್ದು ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದ ದಿನಾಂಕವನ್ನು ನೋಂದಾವಣೆ ಮಾಡಿದ ವಿದ್ಯಾರ್ಥಿಗಳಿಗೆ 10 ದಿನದ ಮುಂಚಿತವಾಗಿ ತಿಳಿಸಲಾಗುವುದು ಮತ್ತು ಉದ್ಯೋಗ ನೇರ ಸಂದರ್ಶನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ತಿಳಿಸಲಾಗುವುದು.

ಈ ವರ್ಷವೂ 8 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು ವಿದ್ಯಾಮಾತಾ ಫೌಂಡೇಶನ್ ಜನಪ್ರತಿನಿಧಿಗಳ, ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲು ಉದ್ದೇಶಿಸಿದೆ. ನೋಂದಾವಣೆ ಮಾಡಲು 9772294246 ನಂಬರಿಗೆ ಮಿಸ್ ಕಾಲ್ ಕೊಡಬಹುದು.

ಹೆಚ್ಚಿನ ಮಾಹಿತಿಗಾಗಿ: ವಿದ್ಯಾಮಾತಾ ಅಕಾಡೆಮಿ, ಹಿಂದುಸ್ಥಾನ್ ಕಾಂಪ್ಲೆಕ್ಸ್ , ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ದ.ಕ. ಫೋನ್ ನಂ.: 9620468869 /9148935808

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

17 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

18 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

18 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

18 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

18 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

18 hours ago