ವಿದ್ಯಾಮಾತಾ ಫೌಂಡೇಶನ್ ವತಿಯಿಂದ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾವಣೆಯನ್ನು ಕಳೆದ 10 ದಿನಗಳ ಹಿಂದೆ ಪ್ರಾರಂಭಿಸಲಾಗಿದ್ದು 2 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಈಗಾಗಲೇ ನೋಂದಾವಣೆಯನ್ನು ಮಾಡಿದ್ದಾರೆ.
9772294246 ನಂಬರಿಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಾವಣೆ ಪ್ರಾರಂಭವಾಗಿದ್ದು ಆಸಕ್ತರು ಈ ನಂಬರ್ ಗೆ ಮಿಸ್ ಕಾಲ್ ಕೊಡುವುದರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಮಿಸ್ ಕಾಲ್ ಕೊಟ್ಟು ನೋಂದಾವಣೆ ಮಾಡುವವರಿಗೆ 10 ದಿನದ ಒಳಗಾಗಿ ವಿದ್ಯಾಮಾತಾ ಫೌಂಡೇಶನ್ ಮೂಲಕ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುವುದು.
ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚಿನ ವಿವಿಧ ಕ್ಷೇತ್ರದ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ ಯಿಂದ ಐ.ಟಿ.ಐ., ಪಿ.ಯು.ಸಿ , ಡಿಪ್ಲೊಮಾ, ಪದವಿ , ಸ್ನಾತಕೋತ್ತರ ಪದವಿ ಮುಗಿಸಿರುವ ಅಥವಾ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗುವುದು.
ಉದ್ಯೋಗ ಮೇಳವು ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದ್ದು ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದ ದಿನಾಂಕವನ್ನು ನೋಂದಾವಣೆ ಮಾಡಿದ ವಿದ್ಯಾರ್ಥಿಗಳಿಗೆ 10 ದಿನದ ಮುಂಚಿತವಾಗಿ ತಿಳಿಸಲಾಗುವುದು ಮತ್ತು ಉದ್ಯೋಗ ನೇರ ಸಂದರ್ಶನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ತಿಳಿಸಲಾಗುವುದು.
ಈ ವರ್ಷವೂ 8 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು ವಿದ್ಯಾಮಾತಾ ಫೌಂಡೇಶನ್ ಜನಪ್ರತಿನಿಧಿಗಳ, ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲು ಉದ್ದೇಶಿಸಿದೆ. ನೋಂದಾವಣೆ ಮಾಡಲು 9772294246 ನಂಬರಿಗೆ ಮಿಸ್ ಕಾಲ್ ಕೊಡಬಹುದು.
ಹೆಚ್ಚಿನ ಮಾಹಿತಿಗಾಗಿ: ವಿದ್ಯಾಮಾತಾ ಅಕಾಡೆಮಿ, ಹಿಂದುಸ್ಥಾನ್ ಕಾಂಪ್ಲೆಕ್ಸ್ , ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ದ.ಕ. ಫೋನ್ ನಂ.: 9620468869 /9148935808
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…