ಮೇ 13ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಹಣದ ಹರಿವು ಮತ್ತು ಉಚಿತ ಕೊಡುಗೆಗಳನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ.ಕೇರಳದ ಅಂತರರಾಜ್ಯ ಗಡಿಯಲ್ಲಿ 10 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಅಂತರ್ ಜಿಲ್ಲಾ ಹಾಗೂ ಸ್ಥಳೀಯ ಚೆಕ್ ಪೋಸ್ಟ್ ಸೇರಿದಂತೆ ಒಟ್ಟು 27 ಚೆಕ್ ಪಾಯಿಂಟ್ಗಳನ್ನು ಸ್ಥಾಪಿಸಲಾಗಿದೆ. ಪೊಲೀಸ್ ಮತ್ತು ಇತರ ಇಲಾಖೆಗಳ ನೆರವಿನೊಂದಿಗೆ ಮಾದರಿ ನೀತಿ ಸಂಹಿತೆಯ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಕುಮಾರ್ ಅವರನ್ನು ಚುನಾವಣಾ ನೀತಿ ಸಂಹಿತೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಜಿಲ್ಲಾ ಚುನಾವಣಾ ಕಚೇರಿಯಿಂದ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡದಂತೆ ಮಾಲ್, ಸಭಾಂಗಣ, ಆಡಿಟೋರಿಯಂಗಳು ಮತ್ತು ಚಿತ್ರಮಂದಿರಗಳ ಮಾಲೀಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಎಚ್ಚರಿಕೆ ನೀಡಿದ್ದಾರೆ.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…