Advertisement
ಸುದ್ದಿಗಳು

ದ ಕ ಜಿಲ್ಲೆಯ ಪ್ರಮುಖ ಉದ್ಯಮಿ ವಿಜಯನಾಥ ವಿಠಲ್ ಶೆಟ್ಟಿ ಆಮ್‌ ಆದ್ಮಿ ಪಕ್ಷ ಸೇರ್ಪಡೆ ?

Share
News Summary
| ಉದ್ಯಮಿ ವಿಜಯನಾಥ ವಿಠಲ ಶೆಟ್ಟಿ ಅವರು ಎಎಪಿ ಸೇರ್ಪಡೆ ? |  ದ ಕ ಜಿಲ್ಲೆಯ ಹಲವು ಮಂದಿ ಎಎಪಿಯತ್ತ ಏಕೆ ಮನಸ್ಸು ಮಾಡಿದ್ದಾರೆ ? | ಅಭಿವೃದ್ಧಿ ಪರವಾದ ನಿಲುವನ್ನು ದಕ ಜಿಲ್ಲೆಯ ಜನ ತಳೆಯುತ್ತಿದ್ದಾರೆಯೇ ?|

ದ ಕ ಜಿಲ್ಲೆಯ ಪ್ರಮುಖ ಉದ್ಯಮಿ, ತುಳುನಾಡಿನ ಕಾರಣಿಕ ಕ್ಷೇತ್ರ ಎಡಪದವು ಶಾಸ್ತಾರ ಭೂತನಾಥೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರಾಗಿರುವ ಕೇಸರಿ ವಸ್ತ್ರದೊಂದಿಗೆ ಗುರುತಿಸಿಕೊಂಡಿರುವ ಮಂಗಳೂರಿನ ವಿಜಯನಾಥ ವಿಠಲ್ ಶೆಟ್ಟಿ ಅವರು ಶೀಘ್ರದಲ್ಲಿಯೇ ಆಮ್‌ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಯಶಸ್ವಿನ ರೂವಾರಿಯಾಗಿದ್ದ ವಿಜಯನಾಥ ವಿಠಲ್ ಶೆಟ್ಟಿಯವರು  ಉದ್ಯಮ ಕ್ಷೇತ್ರದಲ್ಲಿಯೂ , ಸಾಮಾಜಿಕ ಕ್ಷೇತ್ರದಲ್ಲೂ ಹೆಸರುವಾಸಿಯಾಗಿದ್ದಾರೆ. ರಾಜಕೀಯವಾಗಿಯೂ ತೊಡಗಿಸಿಕೊಂಡಿದ್ದ ವಿಜಯನಾಥ ವಿಠಲ್ ಶೆಟ್ಟಿ ಅವರು ಕಳೆದ ಕೆಲವು ಸಮಯಗಳಿಂದ ತಟಸ್ಥರಾಗಿದ್ದರು. ಇದೀಗ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಬೆಳವಣಿಗೆಯ ಗುರಿ ಇರಿಸಿಕೊಂಡು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ  ದೆಹಲಿ ಹಾಗೂ ರಾಜ್ಯದಲ್ಲೂ  ಮಾತುಕತೆ ನಡೆದಿತ್ತು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನುವುದು  ರಾಜಕೀಯ ವಲಯದ ಚರ್ಚೆ.

ಈ ನಡುವೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಪ್ರಮುಖ ನಾಯಕರೊಬ್ಬರು, ಉದ್ಯಮಿ ಹಾಗೂ ಉನ್ನತ ವ್ಯಾಸಾಂಗ ಮಾಡಿರುವ ಯುವ ನಾಯಕರೊಬ್ಬರ ಜೊತೆಯೂ ಮಾತುಕತೆ ನಡೆದಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ  ಚರ್ಚೆಯಾಗುತ್ತಿದೆ.

ಈ ಬಗ್ಗೆ ಆಮ್‌ ಆದ್ಮಿ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ ಸಂತೋಷ್‌ ಕಾಮತ್‌ ಪ್ರತಿಕ್ರಿಯೆ ನೀಡಿ, ಈ ಸುದ್ದಿಗಳ ಬಗ್ಗೆ ಸದ್ಯ ಯಾವುದೇ ಪ್ರತಿಕ್ರಿಯೆ ಇಲ್ಲ.ವಿಜಯನಾಥ ವಿಠಲ್ ಶೆಟ್ಟಿ ಅವರೂ ಎಎಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಶ್ವಾಸ ಇದೆ. ಹಲವು ಮಂದಿ ನಾಯಕರ ಜೊತೆ ಈಗಾಗಲೇ ಮಾತುಕತೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ದ್ವೇಷ ರಹಿತ ರಾಜಕಾರಣದಲ್ಲಿ, ಭ್ರಷ್ಟಾಚಾರ ರಹಿತ ಆಡಳಿತದಲ್ಲಿ ಆಸಕ್ತಿ ಇರುವ ಹಲವಾರು ಮಂದಿ ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಬೇಸತ್ತು ಎಎಪಿ ಸಂಪರ್ಕ ಮಾಡಿದ್ದಾರೆ, ಪಕ್ಷವೂ ಈ ನೆಲೆಯಲ್ಲಿಯೇ ಮಾತುಕತೆ ನಡೆಸುತ್ತಿದೆ ಎಂದಷ್ಟೇ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

13 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

19 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago