Advertisement
ಸುದ್ದಿಗಳು

ದ ಕ ಜಿಲ್ಲೆಯ ಪ್ರಮುಖ ಉದ್ಯಮಿ ವಿಜಯನಾಥ ವಿಠಲ್ ಶೆಟ್ಟಿ ಆಮ್‌ ಆದ್ಮಿ ಪಕ್ಷ ಸೇರ್ಪಡೆ ?

Share
News Summary
| ಉದ್ಯಮಿ ವಿಜಯನಾಥ ವಿಠಲ ಶೆಟ್ಟಿ ಅವರು ಎಎಪಿ ಸೇರ್ಪಡೆ ? |  ದ ಕ ಜಿಲ್ಲೆಯ ಹಲವು ಮಂದಿ ಎಎಪಿಯತ್ತ ಏಕೆ ಮನಸ್ಸು ಮಾಡಿದ್ದಾರೆ ? | ಅಭಿವೃದ್ಧಿ ಪರವಾದ ನಿಲುವನ್ನು ದಕ ಜಿಲ್ಲೆಯ ಜನ ತಳೆಯುತ್ತಿದ್ದಾರೆಯೇ ?|

ದ ಕ ಜಿಲ್ಲೆಯ ಪ್ರಮುಖ ಉದ್ಯಮಿ, ತುಳುನಾಡಿನ ಕಾರಣಿಕ ಕ್ಷೇತ್ರ ಎಡಪದವು ಶಾಸ್ತಾರ ಭೂತನಾಥೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರಾಗಿರುವ ಕೇಸರಿ ವಸ್ತ್ರದೊಂದಿಗೆ ಗುರುತಿಸಿಕೊಂಡಿರುವ ಮಂಗಳೂರಿನ ವಿಜಯನಾಥ ವಿಠಲ್ ಶೆಟ್ಟಿ ಅವರು ಶೀಘ್ರದಲ್ಲಿಯೇ ಆಮ್‌ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಯಶಸ್ವಿನ ರೂವಾರಿಯಾಗಿದ್ದ ವಿಜಯನಾಥ ವಿಠಲ್ ಶೆಟ್ಟಿಯವರು  ಉದ್ಯಮ ಕ್ಷೇತ್ರದಲ್ಲಿಯೂ , ಸಾಮಾಜಿಕ ಕ್ಷೇತ್ರದಲ್ಲೂ ಹೆಸರುವಾಸಿಯಾಗಿದ್ದಾರೆ. ರಾಜಕೀಯವಾಗಿಯೂ ತೊಡಗಿಸಿಕೊಂಡಿದ್ದ ವಿಜಯನಾಥ ವಿಠಲ್ ಶೆಟ್ಟಿ ಅವರು ಕಳೆದ ಕೆಲವು ಸಮಯಗಳಿಂದ ತಟಸ್ಥರಾಗಿದ್ದರು. ಇದೀಗ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಬೆಳವಣಿಗೆಯ ಗುರಿ ಇರಿಸಿಕೊಂಡು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ  ದೆಹಲಿ ಹಾಗೂ ರಾಜ್ಯದಲ್ಲೂ  ಮಾತುಕತೆ ನಡೆದಿತ್ತು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನುವುದು  ರಾಜಕೀಯ ವಲಯದ ಚರ್ಚೆ.

ಈ ನಡುವೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಪ್ರಮುಖ ನಾಯಕರೊಬ್ಬರು, ಉದ್ಯಮಿ ಹಾಗೂ ಉನ್ನತ ವ್ಯಾಸಾಂಗ ಮಾಡಿರುವ ಯುವ ನಾಯಕರೊಬ್ಬರ ಜೊತೆಯೂ ಮಾತುಕತೆ ನಡೆದಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ  ಚರ್ಚೆಯಾಗುತ್ತಿದೆ.

ಈ ಬಗ್ಗೆ ಆಮ್‌ ಆದ್ಮಿ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ ಸಂತೋಷ್‌ ಕಾಮತ್‌ ಪ್ರತಿಕ್ರಿಯೆ ನೀಡಿ, ಈ ಸುದ್ದಿಗಳ ಬಗ್ಗೆ ಸದ್ಯ ಯಾವುದೇ ಪ್ರತಿಕ್ರಿಯೆ ಇಲ್ಲ.ವಿಜಯನಾಥ ವಿಠಲ್ ಶೆಟ್ಟಿ ಅವರೂ ಎಎಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಶ್ವಾಸ ಇದೆ. ಹಲವು ಮಂದಿ ನಾಯಕರ ಜೊತೆ ಈಗಾಗಲೇ ಮಾತುಕತೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ದ್ವೇಷ ರಹಿತ ರಾಜಕಾರಣದಲ್ಲಿ, ಭ್ರಷ್ಟಾಚಾರ ರಹಿತ ಆಡಳಿತದಲ್ಲಿ ಆಸಕ್ತಿ ಇರುವ ಹಲವಾರು ಮಂದಿ ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಬೇಸತ್ತು ಎಎಪಿ ಸಂಪರ್ಕ ಮಾಡಿದ್ದಾರೆ, ಪಕ್ಷವೂ ಈ ನೆಲೆಯಲ್ಲಿಯೇ ಮಾತುಕತೆ ನಡೆಸುತ್ತಿದೆ ಎಂದಷ್ಟೇ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

20 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

22 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

23 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

24 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

24 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago