ದ ಕ ಜಿಲ್ಲೆಯ ಪ್ರಮುಖ ಉದ್ಯಮಿ, ತುಳುನಾಡಿನ ಕಾರಣಿಕ ಕ್ಷೇತ್ರ ಎಡಪದವು ಶಾಸ್ತಾರ ಭೂತನಾಥೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರಾಗಿರುವ ಕೇಸರಿ ವಸ್ತ್ರದೊಂದಿಗೆ ಗುರುತಿಸಿಕೊಂಡಿರುವ ಮಂಗಳೂರಿನ ವಿಜಯನಾಥ ವಿಠಲ್ ಶೆಟ್ಟಿ ಅವರು ಶೀಘ್ರದಲ್ಲಿಯೇ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಯಶಸ್ವಿನ ರೂವಾರಿಯಾಗಿದ್ದ ವಿಜಯನಾಥ ವಿಠಲ್ ಶೆಟ್ಟಿಯವರು ಉದ್ಯಮ ಕ್ಷೇತ್ರದಲ್ಲಿಯೂ , ಸಾಮಾಜಿಕ ಕ್ಷೇತ್ರದಲ್ಲೂ ಹೆಸರುವಾಸಿಯಾಗಿದ್ದಾರೆ. ರಾಜಕೀಯವಾಗಿಯೂ ತೊಡಗಿಸಿಕೊಂಡಿದ್ದ ವಿಜಯನಾಥ ವಿಠಲ್ ಶೆಟ್ಟಿ ಅವರು ಕಳೆದ ಕೆಲವು ಸಮಯಗಳಿಂದ ತಟಸ್ಥರಾಗಿದ್ದರು. ಇದೀಗ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಬೆಳವಣಿಗೆಯ ಗುರಿ ಇರಿಸಿಕೊಂಡು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ದೆಹಲಿ ಹಾಗೂ ರಾಜ್ಯದಲ್ಲೂ ಮಾತುಕತೆ ನಡೆದಿತ್ತು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನುವುದು ರಾಜಕೀಯ ವಲಯದ ಚರ್ಚೆ.
ಈ ನಡುವೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಪ್ರಮುಖ ನಾಯಕರೊಬ್ಬರು, ಉದ್ಯಮಿ ಹಾಗೂ ಉನ್ನತ ವ್ಯಾಸಾಂಗ ಮಾಡಿರುವ ಯುವ ನಾಯಕರೊಬ್ಬರ ಜೊತೆಯೂ ಮಾತುಕತೆ ನಡೆದಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…