Advertisement
ಸುದ್ದಿಗಳು

ದ ಕ ಜಿಲ್ಲೆಯ ಪ್ರಮುಖ ಉದ್ಯಮಿ ವಿಜಯನಾಥ ವಿಠಲ್ ಶೆಟ್ಟಿ ಆಮ್‌ ಆದ್ಮಿ ಪಕ್ಷ ಸೇರ್ಪಡೆ ?

Share
News Summary
| ಉದ್ಯಮಿ ವಿಜಯನಾಥ ವಿಠಲ ಶೆಟ್ಟಿ ಅವರು ಎಎಪಿ ಸೇರ್ಪಡೆ ? |  ದ ಕ ಜಿಲ್ಲೆಯ ಹಲವು ಮಂದಿ ಎಎಪಿಯತ್ತ ಏಕೆ ಮನಸ್ಸು ಮಾಡಿದ್ದಾರೆ ? | ಅಭಿವೃದ್ಧಿ ಪರವಾದ ನಿಲುವನ್ನು ದಕ ಜಿಲ್ಲೆಯ ಜನ ತಳೆಯುತ್ತಿದ್ದಾರೆಯೇ ?|

ದ ಕ ಜಿಲ್ಲೆಯ ಪ್ರಮುಖ ಉದ್ಯಮಿ, ತುಳುನಾಡಿನ ಕಾರಣಿಕ ಕ್ಷೇತ್ರ ಎಡಪದವು ಶಾಸ್ತಾರ ಭೂತನಾಥೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರಾಗಿರುವ ಕೇಸರಿ ವಸ್ತ್ರದೊಂದಿಗೆ ಗುರುತಿಸಿಕೊಂಡಿರುವ ಮಂಗಳೂರಿನ ವಿಜಯನಾಥ ವಿಠಲ್ ಶೆಟ್ಟಿ ಅವರು ಶೀಘ್ರದಲ್ಲಿಯೇ ಆಮ್‌ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಯಶಸ್ವಿನ ರೂವಾರಿಯಾಗಿದ್ದ ವಿಜಯನಾಥ ವಿಠಲ್ ಶೆಟ್ಟಿಯವರು  ಉದ್ಯಮ ಕ್ಷೇತ್ರದಲ್ಲಿಯೂ , ಸಾಮಾಜಿಕ ಕ್ಷೇತ್ರದಲ್ಲೂ ಹೆಸರುವಾಸಿಯಾಗಿದ್ದಾರೆ. ರಾಜಕೀಯವಾಗಿಯೂ ತೊಡಗಿಸಿಕೊಂಡಿದ್ದ ವಿಜಯನಾಥ ವಿಠಲ್ ಶೆಟ್ಟಿ ಅವರು ಕಳೆದ ಕೆಲವು ಸಮಯಗಳಿಂದ ತಟಸ್ಥರಾಗಿದ್ದರು. ಇದೀಗ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಬೆಳವಣಿಗೆಯ ಗುರಿ ಇರಿಸಿಕೊಂಡು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ  ದೆಹಲಿ ಹಾಗೂ ರಾಜ್ಯದಲ್ಲೂ  ಮಾತುಕತೆ ನಡೆದಿತ್ತು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನುವುದು  ರಾಜಕೀಯ ವಲಯದ ಚರ್ಚೆ.

Advertisement

ಈ ನಡುವೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಪ್ರಮುಖ ನಾಯಕರೊಬ್ಬರು, ಉದ್ಯಮಿ ಹಾಗೂ ಉನ್ನತ ವ್ಯಾಸಾಂಗ ಮಾಡಿರುವ ಯುವ ನಾಯಕರೊಬ್ಬರ ಜೊತೆಯೂ ಮಾತುಕತೆ ನಡೆದಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ  ಚರ್ಚೆಯಾಗುತ್ತಿದೆ.

ಈ ಬಗ್ಗೆ ಆಮ್‌ ಆದ್ಮಿ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ ಸಂತೋಷ್‌ ಕಾಮತ್‌ ಪ್ರತಿಕ್ರಿಯೆ ನೀಡಿ, ಈ ಸುದ್ದಿಗಳ ಬಗ್ಗೆ ಸದ್ಯ ಯಾವುದೇ ಪ್ರತಿಕ್ರಿಯೆ ಇಲ್ಲ.ವಿಜಯನಾಥ ವಿಠಲ್ ಶೆಟ್ಟಿ ಅವರೂ ಎಎಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಶ್ವಾಸ ಇದೆ. ಹಲವು ಮಂದಿ ನಾಯಕರ ಜೊತೆ ಈಗಾಗಲೇ ಮಾತುಕತೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ದ್ವೇಷ ರಹಿತ ರಾಜಕಾರಣದಲ್ಲಿ, ಭ್ರಷ್ಟಾಚಾರ ರಹಿತ ಆಡಳಿತದಲ್ಲಿ ಆಸಕ್ತಿ ಇರುವ ಹಲವಾರು ಮಂದಿ ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಬೇಸತ್ತು ಎಎಪಿ ಸಂಪರ್ಕ ಮಾಡಿದ್ದಾರೆ, ಪಕ್ಷವೂ ಈ ನೆಲೆಯಲ್ಲಿಯೇ ಮಾತುಕತೆ ನಡೆಸುತ್ತಿದೆ ಎಂದಷ್ಟೇ ಹೇಳಿದ್ದಾರೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |

ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...

11 hours ago

ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |

ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…

12 hours ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |

ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…

12 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

12 hours ago

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…

13 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

15 hours ago