ದ ಕ ಜಿಲ್ಲೆಯ ಪ್ರಮುಖ ಉದ್ಯಮಿ, ತುಳುನಾಡಿನ ಕಾರಣಿಕ ಕ್ಷೇತ್ರ ಎಡಪದವು ಶಾಸ್ತಾರ ಭೂತನಾಥೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರಾಗಿರುವ ಕೇಸರಿ ವಸ್ತ್ರದೊಂದಿಗೆ ಗುರುತಿಸಿಕೊಂಡಿರುವ ಮಂಗಳೂರಿನ ವಿಜಯನಾಥ ವಿಠಲ್ ಶೆಟ್ಟಿ ಅವರು ಶೀಘ್ರದಲ್ಲಿಯೇ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಯಶಸ್ವಿನ ರೂವಾರಿಯಾಗಿದ್ದ ವಿಜಯನಾಥ ವಿಠಲ್ ಶೆಟ್ಟಿಯವರು ಉದ್ಯಮ ಕ್ಷೇತ್ರದಲ್ಲಿಯೂ , ಸಾಮಾಜಿಕ ಕ್ಷೇತ್ರದಲ್ಲೂ ಹೆಸರುವಾಸಿಯಾಗಿದ್ದಾರೆ. ರಾಜಕೀಯವಾಗಿಯೂ ತೊಡಗಿಸಿಕೊಂಡಿದ್ದ ವಿಜಯನಾಥ ವಿಠಲ್ ಶೆಟ್ಟಿ ಅವರು ಕಳೆದ ಕೆಲವು ಸಮಯಗಳಿಂದ ತಟಸ್ಥರಾಗಿದ್ದರು. ಇದೀಗ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಬೆಳವಣಿಗೆಯ ಗುರಿ ಇರಿಸಿಕೊಂಡು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ದೆಹಲಿ ಹಾಗೂ ರಾಜ್ಯದಲ್ಲೂ ಮಾತುಕತೆ ನಡೆದಿತ್ತು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನುವುದು ರಾಜಕೀಯ ವಲಯದ ಚರ್ಚೆ.
ಈ ನಡುವೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಪ್ರಮುಖ ನಾಯಕರೊಬ್ಬರು, ಉದ್ಯಮಿ ಹಾಗೂ ಉನ್ನತ ವ್ಯಾಸಾಂಗ ಮಾಡಿರುವ ಯುವ ನಾಯಕರೊಬ್ಬರ ಜೊತೆಯೂ ಮಾತುಕತೆ ನಡೆದಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…