ವಿಜಯನಗರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಂತೆ ಎಫ್ಎಕ್ಯೂ (FAQ) ಗುಣಮಟ್ಟದ ಬಿಳಿಜೋಳ ಮತ್ತು ಮಾಲ್ದಂಡಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ಮುಂಗಾರು ಋತುವಿನಲ್ಲಿ ರೈತರಿಂದ ಜೋಳ ಖರೀದಿ ನಡೆಯಲಿದ್ದು, ಮಾರ್ಚ್ 31ರವರೆಗೆ ಪ್ರತಿ ಎಕರೆಗೆ 15 ಕ್ವಿಂಟಾಲ್ನಂತೆ ಗರಿಷ್ಠ 150 ಕ್ವಿಂಟಾಲ್ ಜೋಳವನ್ನು ಖರೀದಿಸಲಾಗುತ್ತದೆ. ಬಿಳಿಜೋಳಕ್ಕೆ ಪ್ರತಿ ಕ್ವಿಂಟಾಲ್ ₹3,699 ಹಾಗೂ ಮಾಲ್ದಂಡಿ ಜೋಳಕ್ಕೆ ₹3,749 ದರ ನಿಗದಿಪಡಿಸಲಾಗಿದೆ.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಎಪಿಎಂಸಿ ಯಾರ್ಡ್ಗಳು ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…