Advertisement
ಸುದ್ದಿಗಳು

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

Share

ಸಾರ್ವಜನಿಕರು ಹಾಗೂ ವಿಶೇಷವಾಗಿ ರೈತರು ಪೂರ್ವ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಗುಡುಗು, ಸಿಡಿಲು ಮತ್ತು ಗಾಳಿ ಮಳೆಯ ಅಪಾಯದಿಂದ ರಕ್ಷಣೆ ಪಡೆಯಲು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದ್ದಾರೆ.

ವಿಜಯನಗರದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಪೂರ್ವ ಮುಂಗಾರು ಸಂದರ್ಭದಲ್ಲಿ ಸಿಡಿಲು ಹಾಗೂ ಗುಡುಗು ಘಟನೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.

ಗುಡುಗು-ಸಿಡಿಲಿನ ಶಬ್ದ ಕೇಳಿದ ತಕ್ಷಣ ತೆರೆದ ಮೈದಾನ, ಗದ್ದೆ ಅಥವಾ ಗುಡ್ಡಗಾಡು ಪ್ರದೇಶಗಳಲ್ಲಿ ಇದ್ದರೆ ಕೂಡಲೇ ಸುರಕ್ಷಿತ ಕಟ್ಟಡದ ಒಳಗೆ ಆಶ್ರಯ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ರೈತರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕಾಗಿದ್ದು, ಗುಡುಗು-ಮಿಂಚು ಆರಂಭವಾದಾಗ ಜಾನುವಾರುಗಳನ್ನು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳಿಗೆ ಕಟ್ಟಬಾರದು. ಅದರ ಬದಲು ಸುರಕ್ಷಿತ ಶೆಡ್ ಅಥವಾ ಕೊಟ್ಟಿಗೆಗಳಲ್ಲಿ ಕಟ್ಟುವುದು ಸೂಕ್ತ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಯಾವುದೇ ರೀತಿಯ ಆಕಸ್ಮಿಕ ಘಟನೆಗಳು ಸಂಭವಿಸಿದಲ್ಲಿ ತಕ್ಷಣ ಹತ್ತಿರದ ತಹಶೀಲ್ದಾರ್ ಕಚೇರಿ ಅಥವಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1077 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

Vijayanagara Deputy Commissioner Kavitha S. Mannikeri has urged the public, especially farmers, to follow safety precautions during the pre-monsoon season due to the risk of thunderstorms, lightning, and strong winds. People are advised to move to safe buildings during lightning and avoid tying cattle under trees or near electric poles.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

6 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

12 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

21 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

21 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

23 hours ago