ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

May 30, 2025
11:14 PM

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯಿಂದ ಕೇಂದ್ರ ಸರ್ಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಅಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಯಬೇಕಾದ ಬೆಳೆಗಳ ಮಾಹಿತಿ, ಕೀಟನಾಶಕಗಳ ಬಳಕೆ ಕುರಿತು ಜಾಗೃತಿ ಹಾಗೂ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಡಾ. ಅವಿನಾಶ್, ಮುಂಗಾರು ಹಂಗಾಮಿನಲ್ಲಿ ಯಾವ ಯಾವ ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಬರಲಿದೆ. ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳುವ ಕುರಿತು ಅಭಿಯಾನದಡಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಡಾ. ತಿಮ್ಮಣ್ಣ, ಕೇವಲ ಇಳುವರಿ ಹೆಚ್ಚಾದರೆ ಸಾಲದು, ಮಣ್ಣಿನ ಆರೋಗ್ಯ ರಕ್ಷಣೆಯತ್ತ ರೈತರು ಗಮನ ಹರಿಸಬೇಕು. ಈ ಕುರಿತಂತೆಯೂ ರೈತರಿಗೆ ಅರಿವು ಮೂಡಿಸಲಾಗುವುದು. ಬೆಳೆಗಳಿಗೆ ಎಷ್ಟು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಕೆ ಮಾಡಬೇಕೆಂಬ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದರು.

ಕೃಷಿಕ ದ್ಯಾಮಣ್ಣ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆಯಂತೆ ಕೃಷಿ ಹೊಂಡದಲ್ಲಿ ಮೀನುಗಳನ್ನು ಸಾಕಾಣಿಕೆ ಮಾಡಿ, ಹೆಚ್ಚಿನ ಆದಾಯ ಗಳಿಸಿರುವುದಾಗಿ ತಿಳಿಸಿದರು. ಮತ್ತೋರ್ವ ಕೃಷಿಕ  ಪರಮೇಶ್ವರಪ್ಪ, ಸಮಗ್ರ ಕೃಷಿ ಯೋಜನೆಯಡಿಯಲ್ಲಿ ಕೃಷಿ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಎರೆಹುಳು ಗೊಬ್ಬರದ ಘಟಕ ಮತ್ತು ಜೇನು ಸಾಕಾಣಿಕೆಯಲ್ಲಿ ತೊಡಗಿಕೊಂಡಿದ್ದು, ಮಿಶ್ರ ಬೆಳೆ ಬೆಳೆಯುವ ಮೂಲಕವೂ ಆದಾಯ ಹೆಚ್ಚಿಸಿಕೊಂಡಿರುವುದಾಗಿ ತಿಳಿಸಿದರು.

ಕೃಷಿ, ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ತಜ್ಞರು ಮತ್ತಿತರರು ಉಪಸ್ಥಿತರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror