ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

May 30, 2025
11:14 PM

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯಿಂದ ಕೇಂದ್ರ ಸರ್ಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಅಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಯಬೇಕಾದ ಬೆಳೆಗಳ ಮಾಹಿತಿ, ಕೀಟನಾಶಕಗಳ ಬಳಕೆ ಕುರಿತು ಜಾಗೃತಿ ಹಾಗೂ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಡಾ. ಅವಿನಾಶ್, ಮುಂಗಾರು ಹಂಗಾಮಿನಲ್ಲಿ ಯಾವ ಯಾವ ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಬರಲಿದೆ. ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳುವ ಕುರಿತು ಅಭಿಯಾನದಡಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಡಾ. ತಿಮ್ಮಣ್ಣ, ಕೇವಲ ಇಳುವರಿ ಹೆಚ್ಚಾದರೆ ಸಾಲದು, ಮಣ್ಣಿನ ಆರೋಗ್ಯ ರಕ್ಷಣೆಯತ್ತ ರೈತರು ಗಮನ ಹರಿಸಬೇಕು. ಈ ಕುರಿತಂತೆಯೂ ರೈತರಿಗೆ ಅರಿವು ಮೂಡಿಸಲಾಗುವುದು. ಬೆಳೆಗಳಿಗೆ ಎಷ್ಟು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಕೆ ಮಾಡಬೇಕೆಂಬ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದರು.

ಕೃಷಿಕ ದ್ಯಾಮಣ್ಣ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆಯಂತೆ ಕೃಷಿ ಹೊಂಡದಲ್ಲಿ ಮೀನುಗಳನ್ನು ಸಾಕಾಣಿಕೆ ಮಾಡಿ, ಹೆಚ್ಚಿನ ಆದಾಯ ಗಳಿಸಿರುವುದಾಗಿ ತಿಳಿಸಿದರು. ಮತ್ತೋರ್ವ ಕೃಷಿಕ  ಪರಮೇಶ್ವರಪ್ಪ, ಸಮಗ್ರ ಕೃಷಿ ಯೋಜನೆಯಡಿಯಲ್ಲಿ ಕೃಷಿ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಎರೆಹುಳು ಗೊಬ್ಬರದ ಘಟಕ ಮತ್ತು ಜೇನು ಸಾಕಾಣಿಕೆಯಲ್ಲಿ ತೊಡಗಿಕೊಂಡಿದ್ದು, ಮಿಶ್ರ ಬೆಳೆ ಬೆಳೆಯುವ ಮೂಲಕವೂ ಆದಾಯ ಹೆಚ್ಚಿಸಿಕೊಂಡಿರುವುದಾಗಿ ತಿಳಿಸಿದರು.

ಕೃಷಿ, ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ತಜ್ಞರು ಮತ್ತಿತರರು ಉಪಸ್ಥಿತರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror