MIRROR FOCUS

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯಿಂದ ಕೇಂದ್ರ ಸರ್ಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಅಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಯಬೇಕಾದ ಬೆಳೆಗಳ ಮಾಹಿತಿ, ಕೀಟನಾಶಕಗಳ ಬಳಕೆ ಕುರಿತು ಜಾಗೃತಿ ಹಾಗೂ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಡಾ. ಅವಿನಾಶ್, ಮುಂಗಾರು ಹಂಗಾಮಿನಲ್ಲಿ ಯಾವ ಯಾವ ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಬರಲಿದೆ. ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳುವ ಕುರಿತು ಅಭಿಯಾನದಡಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಡಾ. ತಿಮ್ಮಣ್ಣ, ಕೇವಲ ಇಳುವರಿ ಹೆಚ್ಚಾದರೆ ಸಾಲದು, ಮಣ್ಣಿನ ಆರೋಗ್ಯ ರಕ್ಷಣೆಯತ್ತ ರೈತರು ಗಮನ ಹರಿಸಬೇಕು. ಈ ಕುರಿತಂತೆಯೂ ರೈತರಿಗೆ ಅರಿವು ಮೂಡಿಸಲಾಗುವುದು. ಬೆಳೆಗಳಿಗೆ ಎಷ್ಟು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಕೆ ಮಾಡಬೇಕೆಂಬ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದರು.

ಕೃಷಿಕ ದ್ಯಾಮಣ್ಣ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆಯಂತೆ ಕೃಷಿ ಹೊಂಡದಲ್ಲಿ ಮೀನುಗಳನ್ನು ಸಾಕಾಣಿಕೆ ಮಾಡಿ, ಹೆಚ್ಚಿನ ಆದಾಯ ಗಳಿಸಿರುವುದಾಗಿ ತಿಳಿಸಿದರು. ಮತ್ತೋರ್ವ ಕೃಷಿಕ  ಪರಮೇಶ್ವರಪ್ಪ, ಸಮಗ್ರ ಕೃಷಿ ಯೋಜನೆಯಡಿಯಲ್ಲಿ ಕೃಷಿ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಎರೆಹುಳು ಗೊಬ್ಬರದ ಘಟಕ ಮತ್ತು ಜೇನು ಸಾಕಾಣಿಕೆಯಲ್ಲಿ ತೊಡಗಿಕೊಂಡಿದ್ದು, ಮಿಶ್ರ ಬೆಳೆ ಬೆಳೆಯುವ ಮೂಲಕವೂ ಆದಾಯ ಹೆಚ್ಚಿಸಿಕೊಂಡಿರುವುದಾಗಿ ತಿಳಿಸಿದರು.

Advertisement

ಕೃಷಿ, ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ತಜ್ಞರು ಮತ್ತಿತರರು ಉಪಸ್ಥಿತರಿದ್ದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

4 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

24 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

2 days ago