Advertisement
MIRROR FOCUS

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

Share

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯಿಂದ ಕೇಂದ್ರ ಸರ್ಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಅಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಯಬೇಕಾದ ಬೆಳೆಗಳ ಮಾಹಿತಿ, ಕೀಟನಾಶಕಗಳ ಬಳಕೆ ಕುರಿತು ಜಾಗೃತಿ ಹಾಗೂ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಡಾ. ಅವಿನಾಶ್, ಮುಂಗಾರು ಹಂಗಾಮಿನಲ್ಲಿ ಯಾವ ಯಾವ ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಬರಲಿದೆ. ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳುವ ಕುರಿತು ಅಭಿಯಾನದಡಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಡಾ. ತಿಮ್ಮಣ್ಣ, ಕೇವಲ ಇಳುವರಿ ಹೆಚ್ಚಾದರೆ ಸಾಲದು, ಮಣ್ಣಿನ ಆರೋಗ್ಯ ರಕ್ಷಣೆಯತ್ತ ರೈತರು ಗಮನ ಹರಿಸಬೇಕು. ಈ ಕುರಿತಂತೆಯೂ ರೈತರಿಗೆ ಅರಿವು ಮೂಡಿಸಲಾಗುವುದು. ಬೆಳೆಗಳಿಗೆ ಎಷ್ಟು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಕೆ ಮಾಡಬೇಕೆಂಬ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದರು.

ಕೃಷಿಕ ದ್ಯಾಮಣ್ಣ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆಯಂತೆ ಕೃಷಿ ಹೊಂಡದಲ್ಲಿ ಮೀನುಗಳನ್ನು ಸಾಕಾಣಿಕೆ ಮಾಡಿ, ಹೆಚ್ಚಿನ ಆದಾಯ ಗಳಿಸಿರುವುದಾಗಿ ತಿಳಿಸಿದರು. ಮತ್ತೋರ್ವ ಕೃಷಿಕ  ಪರಮೇಶ್ವರಪ್ಪ, ಸಮಗ್ರ ಕೃಷಿ ಯೋಜನೆಯಡಿಯಲ್ಲಿ ಕೃಷಿ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಎರೆಹುಳು ಗೊಬ್ಬರದ ಘಟಕ ಮತ್ತು ಜೇನು ಸಾಕಾಣಿಕೆಯಲ್ಲಿ ತೊಡಗಿಕೊಂಡಿದ್ದು, ಮಿಶ್ರ ಬೆಳೆ ಬೆಳೆಯುವ ಮೂಲಕವೂ ಆದಾಯ ಹೆಚ್ಚಿಸಿಕೊಂಡಿರುವುದಾಗಿ ತಿಳಿಸಿದರು.

ಕೃಷಿ, ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ತಜ್ಞರು ಮತ್ತಿತರರು ಉಪಸ್ಥಿತರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

20 minutes ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

7 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

7 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

23 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

24 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

24 hours ago