ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ದೇಶದ 700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು 1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel