ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ದೇಶದ 700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು 1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…