ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ದೇಶದ 700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು 1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…