ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ದೇಶದ 700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು 1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…