ಬಹುದೊಡ್ಡ ಕೆಲಸವೊಂದು ಇಲ್ಲಿ ನಡೆಯುತ್ತಿದೆ. ಇಡೀ ಸಮಾಜವೇ ಈ ಕಡೆ ನೋಡಲೇಬೇಕಾದ ಸಂಗತಿ ಇದು. ಸಾಮಾಜಿಕ ಕಾರ್ಯಕರ್ತ ಮಹೇಶ್ ವಿಕ್ರಂ ಹೆಗಡೆ ನೇತೃತ್ವದ ವಿಕ್ರಂ ಫೌಂಡೇಶನ್ ವತಿಯಿಂದ ಮಂಡೆಕೋಲು ಗ್ರಾ ಪಂ ವ್ಯಾಪ್ತಿಯಲ್ಲಿ ಬಡ ಹಿಂದೂಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕೆಲಸ ನಡೆಯುತ್ತಿದೆ. ಹಿಂದೂ ಜಾಗರಣ ವೇದಿಕೆ ಈ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಸುಮಾರು 6 ಬಡಕುಟುಂಬಗಳಿಗೆ ಮನೆ ಇರಲಿಲ್ಲ. ಕಾರಣ ಸ್ವಂತ ನಿವೇಶನ ಇಲ್ಲದೇ ಇರುವುದು. ಈ ಬಗ್ಗೆ ಹಲವು ಪ್ರಯತ್ನ ನಡೆದಿದೆ. ಆದರೂ ವಿವಿಧ ಕಾರಣಗಳಿಂದ ಪಂಚಾಯತ್ ಹಾಗೂ ಆಡಳಿತಕ್ಕೆ ನಿವೇಶನ ಒದಗಿಲು ಪ್ರಯತ್ನಿಸಿಯೂ ಆಗಲಿಲ್ಲ. ಇದನ್ನು ಜಾಲತಾಣದ ಮೂಲಕ ಗಮನಿಸಿದ ಸಾಮಾಜಿಕ ಕಾರ್ಯಕರ್ತ ಮಹೇಶ್ ವಿಕ್ರಂ ಹೆಗಡೆ ಅವರು ಹಿಂದೂ ಜಾಗರಣ ವೇದಿಕೆ ಸಹಾಯದಿಂದ ಮಂಡೆಕೋಲಿನ ಈ ಬಡು ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಸಾರ್ವಜನಿಕರಿಂದಲೂ ಧನ ಸಂಗ್ರಹ ಮಾಡಿ ವಿಕ್ರಂ ಪೌಂಡೇಶನ್ ತನ್ನ ಸಂಕಲ್ಪದ ಮೊದಲ ಹೆಜ್ಜೆ ಇಟ್ಟಿದೆ.ಈಗಾಗಲೇ ಸಾಕಷ್ಟು ಮಂದಿ ಸಹಾಯ ನೀಡಿದ್ದಾರೆ. ಇದೀಗ ಮನೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆಯಿತು.
ಸಾಮಾಜಿಕ ಜಾಲತಾಣ ಕ್ಲಬ್ ಹೌಸ್ ನಲ್ಲಿ ಸುಳ್ಯದ ಹಿಂದೂ ಜಾಗರಣ ವೇದಿಕೆಯ ಮಹೇಶ್ ಉಗ್ರಾಣಿಮನೆ ಎಂಬುವವರು ಮಂಡೆಕೋಲಿನ ಈ ಬಡ ಕುಟುಂಬಗಳ ಬಗ್ಗೆ ಹೇಳಿದಾಗ, ಮಹೇಶ್ ವಿಕ್ರಂ ಹೆಗಡೆ ಮಾಹಿತಿ ಪಡೆದರು. ಆ ಬಳಿಕ ಅವರಿಗೆ ಸಹಾಯ ಮಾಡುವ ದೃಷ್ಟಿಯಿಂದ ಎಂದು ಸುಧಾಮ ಅಭಿಯಾನವನ್ನು ಶುರುಮಾಡಿದರು. ಹಿಂದೂ ಜಾಗರಣ ವೇದಿಕೆ ಸೇರಿ ಒಂದು ಮನೆ ಕಟ್ಟಿಸಿ ಕೊಡುತ್ತಿದ್ದು ಉಳಿದ ಮನೆಗಳನ್ನು ವಿಕ್ರಂ ಫೌಂಡೇಶನ್ ನಿರ್ಮಿಸಿ ಕೊಡುತ್ತಿದೆ. ಈ ಸಮಾಜ ನಮಗೆ ಸಾಕಷ್ಟು ಕೊಟ್ಟಿದೆ. ಹಾಗಾಗಿ ಜವಾಬ್ದಾರಿಯುತ ನಾಗರೀಕರಾಗಿ ನಮ್ಮ ಕರ್ತವ್ಯವನ್ನು ಮಾಡಬೇಕಿದೆ ಎನ್ನುತ್ತಾರೆ ಮಹೇಶ್.
ಮಂಡೆಕೋಲಿನ ಈ ಕುಟುಂಬಗಳು ಕಡು ಬಡತನವಿದ್ದರೂ ಮಿಷನರಿಗಳ ಆಮಿಷಕ್ಕೆ ಒಳಗಾಗದೆ, ಮತಾಂತರವಾಗುವುದಿಲ್ಲವೆಂಬ ಗಟ್ಟಿ ನಿಲುವಿನೊಂದಿಗೆ ಸ್ವಾಭಿಮಾನದ ಬದುಕನ್ನು ನಡೆಸುತ್ತಿರುವ ಅವರನ್ನು ಕಂಡು ಹೆಮ್ಮೆಯೆನಿಸಿತು ಎಂದು ಮಹೇಶ್ ವಿಕ್ರಂ ಹೆಗಡೆ ಹೇಳುತ್ತಾರೆ. ಹೀಗಾಗಿ ಈ ಕುಟುಂಬಗಳಿಗೆ ಅಗತ್ಯ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯೂ ಹೌದು ಎನ್ನುತ್ತಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…