Advertisement
The Rural Mirror ವಾರದ ವಿಶೇಷ

ಸುಳ್ಯದಲ್ಲಿ ವಿಕ್ರಮ ಫೌಂಡೇಶನ್ ವತಿಯಿಂದ “ಸುಧಾಮ” ಯೋಜನೆಗೆ ಭೂಮಿಪೂಜೆ | ಮಂಡೆಕೋಲಿನಲ್ಲಿ ಬಡ ಹಿಂದೂ ಕುಟುಂಬಗಳಿಗೆ ಸೂರು ಕಟ್ಟುವ ಕಾಯಕ ಆರಂಭ|

Share

ಬಹುದೊಡ್ಡ ಕೆಲಸವೊಂದು ಇಲ್ಲಿ  ನಡೆಯುತ್ತಿದೆ. ಇಡೀ ಸಮಾಜವೇ ಈ ಕಡೆ ನೋಡಲೇಬೇಕಾದ ಸಂಗತಿ ಇದು. ಸಾಮಾಜಿಕ ಕಾರ್ಯಕರ್ತ ಮಹೇಶ್‌ ವಿಕ್ರಂ ಹೆಗಡೆ ನೇತೃತ್ವದ  ವಿಕ್ರಂ ಫೌಂಡೇಶನ್‌ ವತಿಯಿಂದ ಮಂಡೆಕೋಲು ಗ್ರಾ ಪಂ ವ್ಯಾಪ್ತಿಯಲ್ಲಿ ಬಡ ಹಿಂದೂಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕೆಲಸ ನಡೆಯುತ್ತಿದೆ. ಹಿಂದೂ ಜಾಗರಣ ವೇದಿಕೆ ಈ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ. 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಸುಮಾರು 6 ಬಡಕುಟುಂಬಗಳಿಗೆ ಮನೆ ಇರಲಿಲ್ಲ. ಕಾರಣ ಸ್ವಂತ ನಿವೇಶನ ಇಲ್ಲದೇ ಇರುವುದು. ಈ ಬಗ್ಗೆ ಹಲವು ಪ್ರಯತ್ನ ನಡೆದಿದೆ. ಆದರೂ ವಿವಿಧ ಕಾರಣಗಳಿಂದ ಪಂಚಾಯತ್‌ ಹಾಗೂ ಆಡಳಿತಕ್ಕೆ ನಿವೇಶನ ಒದಗಿಲು ಪ್ರಯತ್ನಿಸಿಯೂ ಆಗಲಿಲ್ಲ. ಇದನ್ನು ಜಾಲತಾಣದ ಮೂಲಕ ಗಮನಿಸಿದ ಸಾಮಾಜಿಕ ಕಾರ್ಯಕರ್ತ ಮಹೇಶ್‌ ವಿಕ್ರಂ ಹೆಗಡೆ ಅವರು  ಹಿಂದೂ ಜಾಗರಣ ವೇದಿಕೆ ಸಹಾಯದಿಂದ ಮಂಡೆಕೋಲಿನ ಈ ಬಡು ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಸಾರ್ವಜನಿಕರಿಂದಲೂ ಧನ ಸಂಗ್ರಹ ಮಾಡಿ ವಿಕ್ರಂ ಪೌಂಡೇಶನ್‌ ತನ್ನ ಸಂಕಲ್ಪದ ಮೊದಲ ಹೆಜ್ಜೆ ಇಟ್ಟಿದೆ.ಈಗಾಗಲೇ ಸಾಕಷ್ಟು ಮಂದಿ ಸಹಾಯ ನೀಡಿದ್ದಾರೆ. ಇದೀಗ ಮನೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆಯಿತು.‌

ಸಾಮಾಜಿಕ ಜಾಲತಾಣ ಕ್ಲಬ್ ಹೌಸ್ ನಲ್ಲಿ ಸುಳ್ಯದ ಹಿಂದೂ ಜಾಗರಣ ವೇದಿಕೆಯ ಮಹೇಶ್ ಉಗ್ರಾಣಿಮನೆ ಎಂಬುವವರು ಮಂಡೆಕೋಲಿನ ಈ ಬಡ ಕುಟುಂಬಗಳ ಬಗ್ಗೆ ಹೇಳಿದಾಗ, ಮಹೇಶ್‌ ವಿಕ್ರಂ ಹೆಗಡೆ ಮಾಹಿತಿ ಪಡೆದರು. ಆ ಬಳಿಕ ಅವರಿಗೆ ಸಹಾಯ ಮಾಡುವ ದೃಷ್ಟಿಯಿಂದ ಎಂದು ಸುಧಾಮ ಅಭಿಯಾನವನ್ನು ಶುರುಮಾಡಿದರು.  ಹಿಂದೂ ಜಾಗರಣ ವೇದಿಕೆ ಸೇರಿ ಒಂದು ಮನೆ ಕಟ್ಟಿಸಿ ಕೊಡುತ್ತಿದ್ದು ಉಳಿದ ಮನೆಗಳನ್ನು ವಿಕ್ರಂ ಫೌಂಡೇಶನ್‌ ನಿರ್ಮಿಸಿ ಕೊಡುತ್ತಿದೆ. ಈ ಸಮಾಜ ನಮಗೆ ಸಾಕಷ್ಟು ಕೊಟ್ಟಿದೆ. ಹಾಗಾಗಿ  ಜವಾಬ್ದಾರಿಯುತ ನಾಗರೀಕರಾಗಿ  ನಮ್ಮ ಕರ್ತವ್ಯವನ್ನು ಮಾಡಬೇಕಿದೆ ಎನ್ನುತ್ತಾರೆ ಮಹೇಶ್.

ಮಂಡೆಕೋಲಿನ ಈ ಕುಟುಂಬಗಳು ಕಡು ಬಡತನವಿದ್ದರೂ ಮಿಷನರಿಗಳ ಆಮಿಷಕ್ಕೆ ಒಳಗಾಗದೆ, ಮತಾಂತರವಾಗುವುದಿಲ್ಲವೆಂಬ ಗಟ್ಟಿ ನಿಲುವಿನೊಂದಿಗೆ ಸ್ವಾಭಿಮಾನದ ಬದುಕನ್ನು ನಡೆಸುತ್ತಿರುವ ಅವರನ್ನು ಕಂಡು ಹೆಮ್ಮೆಯೆನಿಸಿತು ಎಂದು ಮಹೇಶ್‌ ವಿಕ್ರಂ ಹೆಗಡೆ ಹೇಳುತ್ತಾರೆ. ಹೀಗಾಗಿ ಈ ಕುಟುಂಬಗಳಿಗೆ ಅಗತ್ಯ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯೂ ಹೌದು ಎನ್ನುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

11 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

13 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

16 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago