Advertisement
The Rural Mirror ವಾರದ ವಿಶೇಷ

ಸುಳ್ಯದಲ್ಲಿ ವಿಕ್ರಮ ಫೌಂಡೇಶನ್ ವತಿಯಿಂದ “ಸುಧಾಮ” ಯೋಜನೆಗೆ ಭೂಮಿಪೂಜೆ | ಮಂಡೆಕೋಲಿನಲ್ಲಿ ಬಡ ಹಿಂದೂ ಕುಟುಂಬಗಳಿಗೆ ಸೂರು ಕಟ್ಟುವ ಕಾಯಕ ಆರಂಭ|

Share

ಬಹುದೊಡ್ಡ ಕೆಲಸವೊಂದು ಇಲ್ಲಿ  ನಡೆಯುತ್ತಿದೆ. ಇಡೀ ಸಮಾಜವೇ ಈ ಕಡೆ ನೋಡಲೇಬೇಕಾದ ಸಂಗತಿ ಇದು. ಸಾಮಾಜಿಕ ಕಾರ್ಯಕರ್ತ ಮಹೇಶ್‌ ವಿಕ್ರಂ ಹೆಗಡೆ ನೇತೃತ್ವದ  ವಿಕ್ರಂ ಫೌಂಡೇಶನ್‌ ವತಿಯಿಂದ ಮಂಡೆಕೋಲು ಗ್ರಾ ಪಂ ವ್ಯಾಪ್ತಿಯಲ್ಲಿ ಬಡ ಹಿಂದೂಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕೆಲಸ ನಡೆಯುತ್ತಿದೆ. ಹಿಂದೂ ಜಾಗರಣ ವೇದಿಕೆ ಈ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ. 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಸುಮಾರು 6 ಬಡಕುಟುಂಬಗಳಿಗೆ ಮನೆ ಇರಲಿಲ್ಲ. ಕಾರಣ ಸ್ವಂತ ನಿವೇಶನ ಇಲ್ಲದೇ ಇರುವುದು. ಈ ಬಗ್ಗೆ ಹಲವು ಪ್ರಯತ್ನ ನಡೆದಿದೆ. ಆದರೂ ವಿವಿಧ ಕಾರಣಗಳಿಂದ ಪಂಚಾಯತ್‌ ಹಾಗೂ ಆಡಳಿತಕ್ಕೆ ನಿವೇಶನ ಒದಗಿಲು ಪ್ರಯತ್ನಿಸಿಯೂ ಆಗಲಿಲ್ಲ. ಇದನ್ನು ಜಾಲತಾಣದ ಮೂಲಕ ಗಮನಿಸಿದ ಸಾಮಾಜಿಕ ಕಾರ್ಯಕರ್ತ ಮಹೇಶ್‌ ವಿಕ್ರಂ ಹೆಗಡೆ ಅವರು  ಹಿಂದೂ ಜಾಗರಣ ವೇದಿಕೆ ಸಹಾಯದಿಂದ ಮಂಡೆಕೋಲಿನ ಈ ಬಡು ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಸಾರ್ವಜನಿಕರಿಂದಲೂ ಧನ ಸಂಗ್ರಹ ಮಾಡಿ ವಿಕ್ರಂ ಪೌಂಡೇಶನ್‌ ತನ್ನ ಸಂಕಲ್ಪದ ಮೊದಲ ಹೆಜ್ಜೆ ಇಟ್ಟಿದೆ.ಈಗಾಗಲೇ ಸಾಕಷ್ಟು ಮಂದಿ ಸಹಾಯ ನೀಡಿದ್ದಾರೆ. ಇದೀಗ ಮನೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆಯಿತು.‌

ಸಾಮಾಜಿಕ ಜಾಲತಾಣ ಕ್ಲಬ್ ಹೌಸ್ ನಲ್ಲಿ ಸುಳ್ಯದ ಹಿಂದೂ ಜಾಗರಣ ವೇದಿಕೆಯ ಮಹೇಶ್ ಉಗ್ರಾಣಿಮನೆ ಎಂಬುವವರು ಮಂಡೆಕೋಲಿನ ಈ ಬಡ ಕುಟುಂಬಗಳ ಬಗ್ಗೆ ಹೇಳಿದಾಗ, ಮಹೇಶ್‌ ವಿಕ್ರಂ ಹೆಗಡೆ ಮಾಹಿತಿ ಪಡೆದರು. ಆ ಬಳಿಕ ಅವರಿಗೆ ಸಹಾಯ ಮಾಡುವ ದೃಷ್ಟಿಯಿಂದ ಎಂದು ಸುಧಾಮ ಅಭಿಯಾನವನ್ನು ಶುರುಮಾಡಿದರು.  ಹಿಂದೂ ಜಾಗರಣ ವೇದಿಕೆ ಸೇರಿ ಒಂದು ಮನೆ ಕಟ್ಟಿಸಿ ಕೊಡುತ್ತಿದ್ದು ಉಳಿದ ಮನೆಗಳನ್ನು ವಿಕ್ರಂ ಫೌಂಡೇಶನ್‌ ನಿರ್ಮಿಸಿ ಕೊಡುತ್ತಿದೆ. ಈ ಸಮಾಜ ನಮಗೆ ಸಾಕಷ್ಟು ಕೊಟ್ಟಿದೆ. ಹಾಗಾಗಿ  ಜವಾಬ್ದಾರಿಯುತ ನಾಗರೀಕರಾಗಿ  ನಮ್ಮ ಕರ್ತವ್ಯವನ್ನು ಮಾಡಬೇಕಿದೆ ಎನ್ನುತ್ತಾರೆ ಮಹೇಶ್.

ಮಂಡೆಕೋಲಿನ ಈ ಕುಟುಂಬಗಳು ಕಡು ಬಡತನವಿದ್ದರೂ ಮಿಷನರಿಗಳ ಆಮಿಷಕ್ಕೆ ಒಳಗಾಗದೆ, ಮತಾಂತರವಾಗುವುದಿಲ್ಲವೆಂಬ ಗಟ್ಟಿ ನಿಲುವಿನೊಂದಿಗೆ ಸ್ವಾಭಿಮಾನದ ಬದುಕನ್ನು ನಡೆಸುತ್ತಿರುವ ಅವರನ್ನು ಕಂಡು ಹೆಮ್ಮೆಯೆನಿಸಿತು ಎಂದು ಮಹೇಶ್‌ ವಿಕ್ರಂ ಹೆಗಡೆ ಹೇಳುತ್ತಾರೆ. ಹೀಗಾಗಿ ಈ ಕುಟುಂಬಗಳಿಗೆ ಅಗತ್ಯ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯೂ ಹೌದು ಎನ್ನುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

3 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

4 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

5 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

6 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

19 hours ago