ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು ಚಂದ್ರನ ಮೇಲೆ ಲ್ಯಾಂಡ್ ಆಗುವತ್ತ ಹೆಜ್ಜೆ ಇಡಲಿದೆ.
ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.
ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…