ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು ಚಂದ್ರನ ಮೇಲೆ ಲ್ಯಾಂಡ್ ಆಗುವತ್ತ ಹೆಜ್ಜೆ ಇಡಲಿದೆ.
ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.
ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…